Share this news

ನವದೆಹಲಿ: ಕೇಂದ್ರ ಚುನಾವಣಾ ಆಯುಕ್ತ ಅರುಣ್ ಗೋಯಲ್ ಶನಿವಾರ ತಮ್ಮ ಸ್ಥಾನಕ್ಕೆ ದಿಢೀರ್ ರಾಜೀನಾಮೆ ಸಲ್ಲಿಸಿದ್ದಾರೆ. ಲೋಕಸಭೆ ಚುನಾವಣೆ ಇನ್ನೇನು ಘೋಷಣೆಯಾಗುವ ಸಂದರ್ಭದಲ್ಲೇ ಚುನಾವಣಾ ಆಯುಕ್ತರ ರಾಜೀನಾಮೆ ಭಾರೀ ಚರ್ಚೆಗೆ ಗ್ರಾಸವಾಗಿದೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅರುಣ್ ಗೋಯಲ್ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ. ಕೇಂದ್ರ ಚುನಾವಣಾ ಆಯೋಗವು ಶೀಘ್ರದಲ್ಲೇ ಚುನಾವಣಾ ದಿನಾಂಕಗಳನ್ನು ಘೋಷಿಸಲಿದೆ. ಅರುಣ್ ಗೋಯಲ್ ಅವರ ಈ ಹೆಜ್ಜೆಯ ನಂತರ ಇದೀಗ ಚುನಾವಣಾ ಆಯೋಗದಲ್ಲಿ 2 ಹುದ್ದೆಗಳು ಖಾಲಿಯಿದ್ದು, ಚುನಾವಣೆಯ ಸಂಪೂರ್ಣ ಜವಾಬ್ದಾರಿ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರ ಹೆಗಲ ಮೇಲೆ ಬಿದ್ದಿದೆ. ಅರುಣ್ ಗೋಯಲ್ ಅವರು ಮುಖ್ಯ ಚುನಾವಣಾ ಆಯುಕ್ತರೊಂದಿಗೆ ಚುನಾವಣಾ ತಯಾರಿಗಾಗಿ ಹಲವು ರಾಜ್ಯಗಳಿಗೆ ಭೇಟಿ ನೀಡಿದ್ದರು. ಇದೀಗ ದಿಢೀರನೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಸಂಬಂಧ ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವಾಲಯ ಶನಿವಾರ ಹೊರಡಿಸಿರುವ ಗೆಜೆಟ್ ಅಧಿಸೂಚನೆಯಲ್ಲಿ, ‘ಚುನಾವಣಾ ಆಯುಕ್ತ ಅರುಣ್ ಗೋಯಲ್ ಅವರ ರಾಜೀನಾಮೆಯನ್ನು ರಾಷ್ಟ್ರಪತಿಗಳು ಅಂಗೀಕರಿಸಿದ್ದು, 2024ರ ಮಾರ್ಚ್ 09ರಿಂದ ಜಾರಿಗೆ ಬರಲಿದೆ ಎಂದು ಪರಿಗಣಿಸಲಾಗಿದೆ.

ಅರುಣ್ ಗೋಯಲ್ 1985ರ ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿದ್ದಾರೆ. ಅವರು ನವೆಂಬರ್ 18, 2022 ರಂದು ಸ್ವಯಂ ನಿವೃತ್ತಿ ಪಡೆದಿದ್ದು ಮರುದಿನ ಚುನಾವಣಾ ಆಯುಕ್ತರಾಗಿ ನೇಮಕಗೊಂಡಿದ್ದರು. ಅವರ ನೇಮಕ ವಿವಾದಕ್ಕೀಡಾಗಿದ್ದು, ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲಾಗಿತ್ತು.

ಗ್ರಾಮ ಲೆಕ್ಕಿಗರ ನೇಮಕಾತಿ 2024: ಕರ್ನಾಟಕ ಕಂದಾಯ ಇಲಾಖೆಯ ಮೂಲಕ 1000 ಗ್ರಾಮ ಲೆಕ್ಕಿಗರ (VA) ಖಾಲಿ ಹುದ್ದೆಗಳಿಗೆ ಈಗಲೇ ಅರ್ಜಿ ಸಲ್ಲಿಸಿ.

Village Accountant Recruitment 2024: Apply Now For 1000 Village Accountant (VA) Vacancies Through Karnataka Revenue Department

Leave a Reply

Your email address will not be published. Required fields are marked *