Share this news

ಕಾರ್ಕಳ: ಸಾಣೂರು ಗ್ರಾಮ ಪಂಚಾಯತ್,ರಾಜರಾಜೇಶ್ವರಿ ಎಜ್ಯುಕೇಶನ್ ಟ್ರಸ್ಟ್ ಮತ್ತು ಲಕ್ಷ್ಯ ಸ್ಪೋರ್ಟ್ಸ್ ಕ್ಲಬ್ ಸಾಣೂರು ಇದರ ವತಿಯಿಂದ ಮಠದಕೆರೆ ಸ್ವಚ್ಛತಾ ಅಭಿಯಾನವು ಮಾ 17ರಂದು ಭಾನುವಾರ ನಡೆಯಿತು.
ಇತಿಹಾಸ ಪ್ರಸಿದ್ಧ ಮಠದ ಕೆರೆ ಪರಿಸರದಲ್ಲಿ ಕೆರೆಯ ಸುತ್ತಲೂ ವಾಕಿಂಗ್ ಟ್ರ್ಯಾಕ್ ,ಉದ್ಯಾನವನ, ಓಪನ್ ಜಿಮ್ , ಪಕ್ಕದಲ್ಲಿಯೇ ಆಟದ ಮೈದಾನದ ಸುತ್ತಮುತ್ತ ಬೆಳೆದಿರುವ ಗಿಡಗಂಟಿಗಳನ್ನು ಕಡಿದು ಪರಿಸರದಲ್ಲಿ ಬಿದ್ದಿದ್ದ ಪ್ಲಾಸ್ಟಿಕ್ ಮತ್ತು ಇನ್ನಿತರ ತ್ಯಾಜ್ಯಗಳನ್ನು ತೆರವುಗೊಳಿಸಿ ಸ್ವಚ್ಛಪಡಿಸಲಾಯಿತು.

ಕೆರೆಯ ಸುತ್ತಲೂ ವೈವಿಧ್ಯಮಯವಾದ ಪ್ರಾಣಿ ಪಕ್ಷಿಗಳ ಸುಂದರ ಕಲಾ ಕೃತಿ ರೂಪದಲ್ಲಿ ಲೈಟಿಂಗ್ ವ್ಯವಸ್ಥೆ ಮಾಡಿರುವುದರಿಂದ ಕೆರೆಯ ಸುತ್ತಲಿನ ನಡಿಗೆ ಪಥ ಮತ್ತು ಓಪನ್ ಜಿಮ್ ನಲ್ಲಿ ವ್ಯಾಯಾಮ ಮಾಡಲು ದಿನಂಪ್ರತಿ ನೂರಾರು ಜನ ಭೇಟಿ ನೀಡುತ್ತಲಿದ್ದು, ಸುಂದರ ಪ್ರವಾಸಿ ತಾಣವಾಗಿ ರೂಪುಗೊಂಡಿದೆ.

ಪಕ್ಕದಲ್ಲಿಯೇ ಪುರಾತನ ಶ್ರೀ ಬಸವಲಿಂಗೇಶ್ವರ ದೇವರ ಗುಡಿಯ ಜೀರ್ಣೋದ್ಧಾರ ಕಾರ್ಯ ಪ್ರಾರಂಭಗೊಂಡಿರುತ್ತದೆ.

ಈ ಪರಿಸರಕ್ಕೆ ಪ್ರವಾಸಿಗರನ್ನು ಇನ್ನಷ್ಟು ಹೆಚ್ಚಿನ ಸಂಖ್ಯೆಯಲ್ಲಿ ಸೆಳೆಯಲು ಪರಿಸರವನ್ನು ಸ್ವಚ್ಛವಾಗಿರಿಸುವ ದೃಷ್ಟಿಯಿಂದ ಸ್ವಚ್ಛತಾ ಅಭಿಯಾನವನ್ನು ಕೈಗೊಳ್ಳಲಾಯಿತು.

ಸಾಣೂರು ಗ್ರಾಮ ಪಂಚಾಯತ್ ನ ನೇತೃತ್ವದಲ್ಲಿ ಆಯೋಜಿಸಲಾದ
ಈ ಅಭಿಯಾನದಲ್ಲಿ ಸಾಣೂರು ಗ್ರಾಮ ಪಂಚಾಯತ್ ಅಧ್ಯಕ್ಷ ಯುವರಾಜ್ ಜೈನ್, ದ ಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕ ಸಾಣೂರು ನರಸಿಂಹ ಕಾಮತ್, ಪಂಚಾಯತ್ ಉಪಾಧ್ಯಕ್ಷೆ ಯಶೋಧ ಶೆಟ್ಟಿ, ತಾಲೂಕು ಪಂಚಾಯತ್ ಮಾಜಿ ಸದಸ್ಯ ಪ್ರವೀಣ್ ಕೋಟ್ಯಾನ್, ಪಂಚಾಯತ್ ಸದಸ್ಯರಾದ ವಸಂತ ಪೂಜಾರಿ, ಅಮಿತಾ.ಪಿ. ಶೆಟ್ಟಿ, ಮಂಜುನಾಥ್ ಶೆಟ್ಟಿ, ರಾಜೇಶ್ವರಿ ಎಜುಕೇಶನ್ ಫೌಂಡೇಶನ್ ಅಧ್ಯಕ್ಷ ದೇವಿ ಪ್ರಸಾದ್ ಶೆಟ್ಟಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಧು, ಏರ್ನಡ್ಕ ವಿಶ್ವನಾಥ್ ಶೆಟ್ಟಿ ಹಾಗೂ ಸಾಣೂರು ಗ್ರಾಮ ಪಂಚಾಯತ್ ನ ಸಿಬ್ಬಂದಿ ವರ್ಗ ಹಾಗೂ ಲಕ್ಷ ಸ್ಪೋರ್ಟ್ಸ್ ಕ್ಲಬ್ ನ ಸದಸ್ಯರಾದ ಸೂರ್ಯ ಪೂಜಾರಿ, ಸುಜಿತ್ ಶೆಟ್ಟಿಗಾರ್ ಮತ್ತಿತರರು ಉಪಸ್ಥಿತರಿದ್ದರು.

ಗ್ರಾಮ ಲೆಕ್ಕಿಗರ ನೇಮಕಾತಿ 2024: ಕರ್ನಾಟಕ ಕಂದಾಯ ಇಲಾಖೆಯ ಮೂಲಕ 1000 ಗ್ರಾಮ ಲೆಕ್ಕಿಗರ (VA) ಖಾಲಿ ಹುದ್ದೆಗಳಿಗೆ ಈಗಲೇ ಅರ್ಜಿ ಸಲ್ಲಿಸಿ.

Village Accountant Recruitment 2024: Apply Now For 1000 Village Accountant (VA) Vacancies Through Karnataka Revenue Department

Leave a Reply

Your email address will not be published. Required fields are marked *