Share this news

ಕಾರ್ಕಳ: ಸಾಣೂರು ಗ್ರಾಮ ಪಂಚಾಯತ್ ಮತ್ತು ರಾಜೇಶ್ವರಿ ಎಜುಕೇಶನ್ ಟ್ರಸ್ಟ್ ಹಾಗೂ ಲಕ್ಷ್ಯ ಸ್ಪೋರ್ಟ್ಸ್ ಕ್ಲಬ್ ಸಾಣೂರು ಇವರ ಸಂಯುಕ್ತ ಆಶ್ರಯದಲ್ಲಿ ಸಾಣೂರು ಗ್ರಾಮದ ಮಠದ ಕೆರೆ ಆವರಣದಲ್ಲಿ ಸ್ವಚ್ಛತೆ ಹಾಗೂ ವನಮಹೋತ್ಸವ ಕಾರ್ಯಕ್ರಮ ಭಾನುವಾರ ನಡೆಯಿತು.
ಶಾಸಕ ಸುನಿಲ್ ಕುಮಾರ್ ಸಸಿ ನೆಟ್ಟು ಕಾರ್ಯಕ್ರಮ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಸಾಣೂರು ಗ್ರಾಮ ಪಂಚಾಯತ್ ಅಧ್ಯಕ್ಷ ಯುವರಾಜ್ ಜೈನ್, ತಾಲೂಕು ಪಂಚಾಯತ್ ಮಾಜಿ ಸದಸ್ಯ ಪ್ರವೀಣ್.ಕೆ.ಕೋಟ್ಯಾನ್,ದ.ಕ ಹಾಲು ಒಕ್ಕೂಟದ ನಿರ್ದೇಶಕ ನರಸಿಂಹ ಕಾಮತ್,ಪಂಚಾಯತ್ ಉಪಾಧ್ಯಕ್ಷೆ ಯಶೋಧ ಶೆಟ್ಟಿ, ಉದ್ಯಮಿ ಸತೀಶ್ ಎಸ್ ಬಂಗೇರ, ಪಂಚಾಯತ್ ಸದಸ್ಯ ಮಂಜುನಾಥ್ ಶೆಟ್ಟಿ ,ರಾಜರಾಜೇಶ್ವರಿ ಎಜ್ಯುಕೇಶನ್ ಟ್ರಸ್ಟ್ ನ ನಿರ್ದೇಶಕ ದೇವಿ ಪ್ರಸಾದ್ ಶೆಟ್ಟಿ ಸ್ಥಳೀಯರಾದ ಉದಯ್ಅಂಚನ್ , ಪ್ರಭಾಕರ್, ಸದಾಶಿವ ಹಾಗೂ ಸಾಣೂರು ಲಕ್ಷ್ಯ ಸ್ಪೋರ್ಟ್ಸ್ ಕ್ಲಬ್ ನ ಸದಸ್ಯರಾದ ಪವೀಣ್ ಪೂಜಾರಿ,ನಿಖಿಲ್ ಶೆಟ್ಟಿಗಾರ್, ಕೌಶಿಕ್ ಮತ್ತಿತರರು ಉಪಸ್ಥಿತರಿದ್ದರು.

 

 

 

                        

                          

 

 

 

 

 

                        

                          

 

Leave a Reply

Your email address will not be published. Required fields are marked *