ಕಾರ್ಕಳ: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಅವ್ಯವಹಾರ ಕುರಿತಂತೆ ಕೇವಲ ಸಚಿವ ಬಿ.ನಾಗೇಂದ್ರ ರಾಜೀನಾಮೆ ನೀಡಿದರೆ ಸಾಲದು, ಇದರ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಆಗ್ರಹಿಸಿದ್ದಾರೆ.
ಇಷ್ಟು ದಿನಗಳ ಕಾಲ ಸಚಿವರ ರಕ್ಷಣೆ ಮಾಡಿದ್ದ ಸಿದ್ದರಾಮಯ್ಯ ಈಗ ತನಿಖೆಗೆ ಸಿಬಿಐ ಪ್ರವೇಶವಾಗುತ್ತಿದೆ ಎಂದಾಗ ನಾಗೇಂದ್ರ ರಾಜೀನಾಮೆ ಪಡೆದುಕೊಂಡಿದ್ದಾರೆ. ಹಾಗಾದರೆ ಇಷ್ಟು ದಿನಗಳ ಕಾಲ ಈ ರಕ್ಷಣೆಯ ನಾಟಕ ಮಾಡಿದ್ದು ಪರಿಶಿಷ್ಟ ವರ್ಗಕ್ಕೆ ಮಾಡಿದ ಅನ್ಯಾಯವಲ್ಲವೇ ? ಸಿಎಂ ಸಿದ್ದರಾಮಯ್ಯ ಅವರ ಈ ವರ್ತನೆ ಖಂಡಿಸಿ ಸದನದ ಒಳ ಹೊರಗೆ ಬಿಜೆಪಿ ಉಗ್ರ ಹೋರಾಟ ನಡೆಸಲಿದೆ. ಈ ಹಗರಣದಲ್ಲಿ ಮುಖ್ಯಮಂತ್ರಿ ಕಚೇರಿಯ ನೇರ ಪಾಲ್ಗೊಂಡಿದೆ ಎಂದು ಸುನಿಲ್ ಕುಮಾರ್ ಆರೋಪಿಸಿದ್ದಾರೆ.