Share this news

 

 

ಬೆಂಗಳೂರು : ವಸತಿ ಯೋಜನೆಯಡಿ ಮನೆ ಹಂಚಿಕೆಯಲ್ಲಿ ಲಂಚ ಪಡೆದ ಆರೋಪ ಪ್ರಕರಣಕ್ಕೆ ಕುರಿತಂತೆ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಸಮಗ್ರ ತನಿಖೆ ನಡೆಸುವಂತೆ ಸೋಮವಾರ ರಾಜ್ಯಪಾಲರಿಗೆ ದೂರು ನೀಡಿದ್ದರು. ಈ ದೂರಿನ ಬೆನ್ನಲ್ಲೇ ಇದೀಗ ಸಚಿವ ಜಮೀರ್ ಅಹ್ಮದ್ ಅವರ ವಿರುದ್ಧ ಜೆಡಿಎಸ್ ಮುಖಂಡ ಪ್ರದೀಪ್ ಎಂಬವರು ರಾಜ್ಯಪಾಲರಿಗೆ ದೂರು ನೀಡಿದ್ದಾರೆ.

ಸಚಿವ ಜಮೀರ್ ಅಹಮದ್ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಲಾಗಿದ್ದು, ಜೆಡಿಎಸ್ ಕಾನೂನು ವಿಭಾಗದ ಪ್ರದೀಪ್ ಸಚಿವ ಜಮೀರ್ ಅಹ್ಮದ್ ಖಾನ್ ಅವರ ವಿರುದ್ಧ ದೂರು ನೀಡಿದ್ದಾರೆ. ಮುಖ್ಯಮಂತ್ರಿ ಮತ್ತು ಆರ್ಥಿಕ ಇಲಾಖೆಯ ಅನುಮತಿ ಪಡೆಯದೇ ಅನುದಾನ ದುರ್ಬಳಕೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಸುಮಾರು 831 ಕೋಟಿ ಅನುದಾನ ವಂಚಿಸಿದ ಬಗ್ಗೆ ರಾಜ್ಯಪಾಲರಿಗೆ ಪ್ರದೀಪ್ ದೂರು ನೀಡಿದ್ದಾರೆ. ಅಕ್ರಮದ ತನಿಖೆ ಮತ್ತು ಪ್ರಾಸಿಕ್ಯೂಷನ್ ತನಿಖೆಗೆ ಆದೇಶಿಸುವಂತೆ ರಾಜ್ಯಪಾಲರಿಗೆ ಜೆಡಿಎಸ್ ಮುಖಂಡ ಪ್ರದೀಪ್ ಮನವಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.

 

 

 

 

 

 

 

 

Leave a Reply

Your email address will not be published. Required fields are marked *