Share this news

 

ಬೆಂಗಳೂರು:ರಾಜ್ಯ ಕಾಂಗ್ರೆಸ್ ಸರ್ಕಾರ ಸಿದ್ದಪಡಿಸಿರುವ ಜಾತಿ ಗಣತಿ ವರದಿಯನ್ನು ಕಾಂಗ್ರೆಸ್ ಹೈಕಮಾಂಡ್ ಕಸದ ಬುಟ್ಟಿಗೆ ಎಸೆದಿದೆ. 150 ಕೋಟಿ ರೂ.ವೆಚ್ಚದ ಈ ವರದಿಗೆ ರಾಜ್ಯದ ತೆರಿಗೆದಾರರಿಗೆ ಹಣ ಬಳಸಿದ್ದು ಇದು ತೆರಿಗೆ ಪಾವತಿದಾರರಿಗೆ ಹಾಗೂ ಹಿಂದುಳಿದ ಮತ್ತು ಶೋಷಿತ ಸಮುದಾಯಕ್ಕೆ ಮಾಡಿದ ಮಹಾಮೋಸವಾಗಿದೆ ಎಂದು ಮಾಜಿ ಸಚಿವ ಸುನಿಲ್ ಕುಮಾರ್ X ನಲ್ಲಿ ಆಕ್ರೋಶ ಹೊರಹಾಕಿದ್ದಾರೆ.
ಸಿದ್ದರಾಮಯ್ಯ ಸರ್ಕಾರದ ವಿರುದ್ಧ X ನಲ್ಲಿ ಪೋಸ್ಟ್ ಮಾಡಿದ ಸುನಿಲ್ ಜಾತಿ ಗಣತಿ ವರದಿಯ ದತ್ತಾಂಶದಲ್ಲಿ ಲೋಪವಿದೆ, ಇದನ್ನು ಪುನರ್ ಪರಿಶೀಲಿಸಬೇಕು ಎಂದು ಭಾರತೀಯ‌ ಜನತಾ ಪಕ್ಷ‌ ಪದೇ ಪದೇ ಆಗ್ರಹಿಸಿತ್ತು. ಆದರೆ ಸಿದ್ದರಾಮಯ್ಯನವರು ಇಂಥ ಸೂಕ್ಷ್ಮ ವಿಚಾರದಲ್ಲೂ ತಮ್ಮ‌ ಎಂದಿನ ಉಡಾಫೆಯನ್ನು ಮುಂದುವರಿಸಿದ್ದರು. ಸಚಿವ ಸಂಪುಟ ಸಭೆಯಲ್ಲಿ ವರದಿ ಮಂಡಿಸಿದ್ದರು. ನಂದಿ‌ಬೆಟ್ಟದಲ್ಲಿ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ವರದಿ ಸ್ವೀಕರಿಸುವುದಕ್ಕೂ ಮುಂದಾಗಿದ್ದರು. ಆದರೆ ಈ ವರದಿಯ ದತ್ತಾಂಶ ಸರಿಯಿಲ್ಲ, ಕಾಲಮಿತಿಯಲ್ಲಿ‌ ಮರು ಗಣತಿ ಮಾಡಿ ಎಂದು ಕಾಂಗ್ರೆಸ್ ಹೈಕಮಾಂಡ್ ಕಿವಿ ಹಿಂಡಿ ವರದಿಯನ್ನು ಕಸದ ಬುಟ್ಟಿಗೆ ಹಾಕಿದೆ.
ಸಿದ್ದರಾಮಯ್ಯನವರಷ್ಟೇ ಅಲ್ಲ, ಕಾಂಗ್ರೆಸ್ ಹೈಕಮಾಂಡ್ ಕೂಡಾ ರಾಜ್ಯದ ಹಿಂದುಳಿದ ವರ್ಗ, ಶೋಷಿತ ಸಮುದಾಯದ ಭಾವನೆಗಳಿಗೆ ನೋವುಂಟು ಮಾಡಿದ್ದಾರೆ. ಕಳೆದ ಹತ್ತು ವರ್ಷಗಳಿಂದ ಸಿದ್ದರಾಮಯ್ಯನವರು ಇದೇ ವಿಚಾರವನ್ನು ಮುಂದಿಟ್ಟು ರಾಜ್ಯದ ಜನರನ್ನು ಮೂರ್ಖರನ್ನಾಗಿಸುವ ಜತೆಗೆ ಸಮುದಾಯಗಳ ಮಧ್ಯೆ ಅಸಮಾಧಾನ ಬೇಸರವನ್ನು ಸೃಷ್ಟಿಸಿದ್ದರು. ಈ ಎಲ್ಲಾ ಅವಾಂತರಗಳ ಕಾರಣಕ್ಕಾಗಿ ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಪಕ್ಷ ರಾಜ್ಯದ ಜನತೆಯ ಕ್ಷಮೆಯಾಚಿಸಬೇಕೆಂದು ಸುನಿಲ್ ಕುಮಾರ್ ಆಗ್ರಹಿಸಿದ್ದಾರೆ

 

 

 

 

 

 

Leave a Reply

Your email address will not be published. Required fields are marked *