ಬೆಂಗಳೂರು : ರಾಜ್ಯದಲ್ಲಿ 136 ಸ್ಥಾನಗಳನ್ನು ಗೆದ್ದು ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಮುಂಬರುವ ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆ ದೃಷ್ಟಿಯಿಂದ ಈಗಿನಿಂದಲೇ ಭಾರಿ ಸಿದ್ಧತೆ ನಡೆಸುತ್ತಿದ್ದು, ಪಕ್ಷವನ್ನು ಇನ್ನಷ್ಟು ಬಲಪಡಿಸುವ ನಿಟ್ಟಿನಲ್ಲಿ ಜೆಡಿಎಸ್ ನ ಹಲವು ಶಾಸಕರನ್ನು ತನ್ನ ತೆಕ್ಕೆಗೆ ಸೆಳೆದುಕೊಳ್ಳುವಲ್ಲಿ ಪ್ರಯತ್ನಿಸುತ್ತಿದೆ ಎನ್ನಲಾಗುತ್ತಿದ್ದು, ಈಗಾಗಲೇ ಜೆಡಿಎಸ್ ನ ಹಲವು ಶಾಸಕರ ಸಂಪರ್ಕದಲ್ಲಿರುವ ಕಾಂಗ್ರೆಸ್ ನಾಯಕರು, ಅವರನ್ನು ಪಕ್ಷಕ್ಕೆ ಸೆಳೆಯುವ ಆಪರೇಷನ್ ಹಸ್ತಕ್ಕೆ ಮುಂದಾಗಿದ್ದಾರೆ ಎಂದು ಉನ್ನತ ಮೂಲಗಳಿಂದ ತಿಳಿದು ಬಂದಿದೆ.
ಮೂಲಗಳ ಪ್ರಕಾರ ಜೆಡಿಎಸ್ ಪಕ್ಷದ 6 ಶಾಸಕರನ್ನು ಕಾಂಗ್ರೆಸ್ ನಾಯಕರು ಸಂಪರ್ಕಿಸಿದ್ದಾರೆ ಎನ್ನಲಾಗಿದ್ದು ಈಗ ಒಟ್ಟು 10 ಶಾಸಕರ ಸಂಪರ್ಕಕ್ಕೆ ಯತ್ನಿಸಿದ್ದು, ಬಿಜೆಪಿ ವಿರುದ್ಧ ಗೆದ್ದಿರುವ ಜೆಡಿಎಸ್ ಶಾಸಕರನ್ನು ಸಳೆಯಲು ಮೊದಲು ಆದ್ಯತೆ ನೀಡಿದ್ದಾರೆ. ದೇವದುರ್ಗ ಶಾಸಕಿ ಕರೆಮ್ಮ, ಶಾಸಕ ಸಮೃದ್ಧಿ ಮಂಜುನಾಥ್ ಸೇರಿ ಹಲವು ಶಾಸಕರನ್ನು ಸಂಪರ್ಕಿಸಿದ್ದಾರೆ ಎಂದು ತಿಳಿದು ಬಂದಿದೆ. ಈ ಮೂಲಕ ಮುಂದಿನ ಚುನಾವಣೆಗೆ ಪೂರ್ವಸಿದ್ಧತೆ ನಡೆಸುತ್ತಿದ್ದಾರೆ ಎನ್ನಲಾಗುತ್ತಿದೆ.
