Share this news

ಬೆಂಗಳೂರು: ಶುದ್ಧ ಇಂಧನ ಮೂಲಸೌಕರ್ಯ ಹೆಚ್ಚಿಸಲು ಮತ್ತು ರಾಜ್ಯಕ್ಕೆ ಇಂಧನ ಭದ್ರತೆ ಹೆಚ್ಚಿಸಲು ಪಾವಗಡ ಸೋಲಾರ್ ಪಾರ್ಕ್ ಮಾದರಿಯಲ್ಲೇ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನಲ್ಲಿ ಶೀಘ್ರವೇ ಸೋಲಾರ್ ಪಾರ್ಕ್ ನಿರ್ಮಾಣ ಮಾಡಲಾಗುವುದು ಎಂದು ಇಂಧನ ಸಚಿವ ಕೆಜೆ ಜಾರ್ಜ್ ಸೋಮವಾರ ಹೇಳಿದ್ದಾರೆ. ಕೇಂದ್ರ ಸರ್ಕಾರದ ತೆಹ್ರಿ ಹೈಡ್ರೊ ಡೆವಲಪ್‌ಮೆಂಟ್ ಕಾರ್ಪೊರೇಷನ್ ಸಹಭಾಗಿತ್ವದಲ್ಲಿ ಈ ಸೋಲಾರ್ ಪಾರ್ಕ್ ನಿರ್ಮಾಣವಾಗಲಿದೆ.
ಸೋಲಾರ್ ಪಾರ್ಕ್ ಗೆ ಅಗತ್ಯವಾದ ಸೂಕ್ತವಾದ ಭೂಮಿಯನ್ನು ಗುರುತಿಸಲು ಸ್ಥಳೀಯ ಪರಿಣತಿ ಮತ್ತು ಸಂಪನ್ಮೂಲಗಳನ್ನು ಬಳಸಿಕೊಳ್ಳುವ ಉದ್ದೇಶವಿದೆ ಎಂದು ಕೆಜೆ ಜಾರ್ಜ್ ಹೇಳಿದರು. ಅವರು ತುಮಕೂರಿನಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕುಸುಮ್-ಸಿ ಯೋಜನೆಯ ಅನುಷ್ಠಾನದ ಪರಿಶೀಲನೆ ನಡೆಸಿ ಮಾತನಾಡಿದರು.
ಇದೇ ವೇಳೆ ಅವರು ತುಮಕೂರು ಜಿಲ್ಲೆಯಲ್ಲಿ ಎರಡು ಹೊಸ ವಿದ್ಯುತ್ ಉಪಕೇಂದ್ರಗಳನ್ನು ಉದ್ಘಾಟಿಸಿದರು.ಇದಲ್ಲದೇ ಕೊರಟಗೆರೆ ತಾಲೂಕಿನ ಭೈರೇನಹಳ್ಳಿಯಲ್ಲಿ 12.62 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ 2X8 ಎಂವಿಎ 66/11 ಕೆವಿ ಸಬ್ ಸ್ಟೇಷನ್ ಮತ್ತು 14.33 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಸಂಕೇನಹಳ್ಳಿಯ(ಐಕೆ ಕಾಲೋನಿ) 2X8 ಎಂವಿಎ, 66/11 ಕೆವಿ ಸಬ್ ಸ್ಟೇಷನ್ ಗೆ ಚಾಲನೆ ನೀಡಿದರು.

                        

                          

                        

                          

 

Leave a Reply

Your email address will not be published. Required fields are marked *