Share this news

ಬೆಂಗಳೂರು: ಕಚೇರಿ ಕೆಲಸಗಳಿಗೆ ಟ್ಯಾಬ್ ಸಹಿತ ಮೂಲಸೌಕರ್ಯ ಕಲ್ಪಿಸುವಂತೆ ಗ್ರಾಮ ಆಡಳಿತಾಧಿಕಾರಿಗಳು ನಡೆಸಿದ ಪ್ರತಿಭಟನೆಗೆ ಫಲ ಸಿಕ್ಕಂತಾಗಿದೆ
ರಾಜ್ಯದ ಗ್ರಾಮ ಆಡಳಿತಾಧಿಕಾರಿಗಳಿಗೆ ಎಲ್ಲಾ VAO ಗಳಿಗೆ ಟ್ಯಾಬ್ ವಿತರಣೆ ಮಾಡುವುದಾಗಿ ಕಂದಾಯ ಸಚಿವ ಕೃಷ್ಣಭೈರೇಗೌಡ ಘೋಷಿಸಿದ್ದಾರೆ.

ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಪದಾಧಿಕಾರಿಗಳು ವಿಕಾಸಸೌಧದ ಕಂದಾಯ ಸಚಿವರ ಕಚೇರಿಯಲ್ಲಿ ಭೇಟಿಯಾಗಿ ತಮ್ಮ ಬೇಡಿಕೆಯನ್ನು ಸಲ್ಲಿಸಿದ್ದಾರೆ. ಈ ವೇಳೆ ಗ್ರಾಮ ಆಡಳಿತ ಅಧಿಕಾರಿಗಳ ಬೇಡಿಕೆಗಳ ಈಡೇರಿಕೆಗೆ ಸಂಬಂಧಿಸಿದಂತೆ ಎರಡು ಗಂಟೆಗೂ ಹೆಚ್ಚು ಕಾಲ ಚರ್ಚಿಸಲಾಯಿತು.

ಗ್ರಾಮ ಆಡಳಿತ ಅಧಿಕಾರಿಗಳಿಗೆ ಕೆಲಸದ ಹೊರೆ ಅಧಿಕವಾಗಿದೆ ಎಂಬುದರಲ್ಲಿ ಎರಡು ಮಾತಿಲ್ಲ. ಅವರ ಶ್ರಮವಿಲ್ಲದೇ ಬರ ಸಂದರ್ಭದಲ್ಲಿ “ಫ್ರೂಟ್ಸ್ʼ ಮೂಲಕ ನೈಜ ದತ್ತಾಂಶಗಳನ್ನು ಪಡೆದು ರೈತರ ಖಾತೆಗೆ ನೇರವಾಗಿ ಬರ ಪರಿಹಾರ ತಲುಪಿಸುವುದು ಸಾಧ್ಯವಾಗುತ್ತಿರಲಿಲ್ಲ. ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಾದ ಬೀಟ್ ಆ್ಯಪ್ ಹಾಗೂ ಆಧಾರ್ ಸೀಡಿಂಗ್ ಹಾಗೂ ಪೌತಿ ಖಾತೆ ಆಂದೋಲನದಲ್ಲಿಯೂ ಗ್ರಾಮ ಆಡಳಿತ ಅಧಿಕಾರಿಗಳ ಪಾತ್ರ ಮಹತ್ತರವಾಗಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಏಕ ಕಾಲದಲ್ಲಿ ಎಲ್ಲಾ ಅಭಿಯಾನಗಳಿಗೂ ಒಟ್ಟಿಗೆ ಚಾಲನೆ ನೀಡದೇ, ಅವರ ಕೆಲಸದ ಒತ್ತಡಗಳನ್ನು ಕಡಿಮೆಗೊಳಿಸುವ ನಿಟ್ಟಿನಲ್ಲಿ ಕ್ರಮವಹಿಸಲಾಗುವುದು ಸಚಿವರು ಭರವಸೆ ನೀಡಿದರು ‌
ಗ್ರಾಮ ಆಡಳಿತ ಅಧಿಕಾರಿಗಳಿಗೆ ಮೊಬೈಲ್ ಅಥವಾ ಲ್ಯಾಪ್ಟಾಪ್ ನೀಡಬೇಕು ಎಂಬ ಬೇಡಿಕೆ ಇದೆ. ಸರ್ಕಾರವೂ ಈಗಾಗಲೇ ಈ ಬಗ್ಗೆ ಚಿಂತನೆ ನಡೆಸಿದೆ. ಫೀಲ್ಡ್ ನಲ್ಲಿ ಕೆಲಸ ಮಾಡುವ ಅಧಿಕಾರಿಗಳಿಗೆ ಲ್ಯಾಪ್ ಟಾಪ್ -ಮೊಬೈಲ್ ಎರಡೂ ರೀತಿ ಕೆಲಸ ಮಾಡಬಲ್ಲ ಟ್ಯಾಬ್ ನೀಡಲು‌ ನಿರ್ಧರಿಸಲಾಗಿದೆ, ಈಗಾಗಲೇ ಸಣ್ಣ ಪ್ರಮಾಣದಲ್ಲಿ ಅಧಿಕಾರಿಗಳಿಗೆ ಟ್ಯಾಬ್ ವಿತರಿಸಲಾಗಿದ್ದು, ಮುಂದಿನ ವರ್ಷದೊಳಗೆ ಎಲ್ಲಾ ಗ್ರಾಮ ಆಡಳಿತ ಅಧಿಕಾರಿಗಳಿಗೂ ಟ್ಯಾಬ್ ನೀಡಲು ಸರ್ಕಾರ ಹಾಗೂ ಇಲಾಖೆ ಬದ್ಧವಾಗಿದೆ ಎಂದು ಸಚಿವ ಕೃಷ್ಣಭೈರೇಗೌಡ ಭರವಸೆ ನೀಡಿದರು.

ಗ್ರಾಮ ಆಡಳಿತ ಅಧಿಕಾರಿಗಳಿಗೂ ಸರ್ಕಾರಿ ಕಚೇರಿ ನಿರ್ಮಿಸಬೇಕು ಮೂಲಭೂತ ಸೌಲಭ್ಯ ಒದಗಿಸಬೇಕು ಎಂಬ ಪ್ರಮುಖ ಬೇಡಿಕೆ ಇದೆ. ಸರ್ಕಾರಿ ಅಧಿಕಾರಿಗಳು ಕಚೇರಿಯಲ್ಲೇ ಕುಳಿತು ಕೆಲಸ ಮಾಡಬೇಕು ಎಂಬ ವಿಚಾರದಲ್ಲಿ ನನ್ನ ಅಭಿಪ್ರಾಯವೂ ಅದೇ ಆಗಿದೆ. ಈ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಸೂಕ್ತ ಕ್ರಮ ತೆಗೆದುಕೊಳ್ಳುವ ಬಗ್ಗೆ ಭರವಸೆ ನೀಡಲಾಗಿದೆ.

ಪತಿ-ಪತ್ನಿ ಪ್ರಕರಣದಲ್ಲಿ ಅಂತರ್ ಜಿಲ್ಲೆ ವರ್ಗಾವಣೆ ನೀಡುವ ಸಂಬಂಧ ಕೆಸಿಎಸ್ಆರ್ 16A ನಿಯಮದ ಅನ್ವಯ ನಿಯಮಬದ್ಧವಾಗಿ ಬಂದಿರುವ ಪ್ರಸ್ತಾವನೆಗಳ ಕುರಿತು ಮುಂದಿನ ವಾರದೊಳಗೆ ಕ್ರಮವಹಿಸುವಂತೆ ಸಂಬಂಧಿತ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಗ್ರಾಮ ಆಡಳಿತ ಅಧಿಕಾರಿಗಳನ್ನು ಅನಗತ್ಯವಾಗಿ ಎಸಿ ಡಿಸಿ ಕಚೇರಿಗಳಿಗೆ ಮಾಡಲಾಗಿರುವ ನಿಯೋಜನೆ ರದ್ದುಗೊಳಿಸುವ ಸಂಬಂಧ ಈಗಾಗಲೇ ಸಂಬಂಧಿತ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಗ್ರಾಮ ಆಡಳಿತ ಅಧಿಕಾರಿಗಳ ಬೇಡಿಕೆಗಳನ್ನು ಪರಿಶೀಲಿಸುವ ಸಂಬಂಧ ಹಿರಿಯ ಐಎಎಸ್ ಅಧಿಕಾರಿ ಬೆಂಗಳೂರು ವಲಯದ ಪ್ರಾದೇಶಿಕ ಆಯುಕ್ತರಾದ ಆಮ್ಲನ್ ಆದಿತ್ಯ ಬಿಶ್ವಾಸ್ ಅವರಿಗೆ ಜವಾಬ್ದಾರಿ ವಹಿಸಲಾಗಿದೆ. ಹೀಗಾಗಿ ಅವರು ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಪದಾಧಿಕಾರಿಗಳು ಜೊತೆ ಚರ್ಚಿಸಲಿದ್ದಾರೆ. ಆಮ್ಲನ್ ಆದಿತ್ಯ ಬಿಶ್ವಾಸ್ ಅವರ ಮಾರ್ಗದರ್ಶನದಂತೆ ಮುಂದಿನ ಕ್ರಮ ಜರುಗಿಸಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು

 

 

Leave a Reply

Your email address will not be published. Required fields are marked *