Share this news

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗೆ ಹಣ ಹೊಂದಾಣಿಕೆಗೆ ಮತ್ತೊಂದು ದಾರಿಯನ್ನು ಹಿಡಿದಿದೆ. ಪರಿಶಿಷ್ಟ ಜಾತಿ ಉಪ ಯೋಜನೆ ( SCSP) ಹಾಗೂ ಪರಿಶಿಷ್ಟ ಪಂಗಡಗಳ ಉಪ ಯೋಜನೆ(TSP) ಯೋಜನೆಗಳಿಗೆ ಮೀಸಲಿಟ್ಟಿದ್ದ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಿ ದಲಿತರಿಗೆ ಕಾಂಗ್ರೆಸ್ ದ್ರೋಹ ಎಸಗಿದೆ ಬಿಜೆಪಿ ಗಂಭೀರ ಆರೋಪ ಮಾಡಿದೆ.

ಇದಕ್ಕೆ ಪೂರಕ ಎಂಬಂತೆ ರಾಜ್ಯ ಸರ್ಕಾರವು ಗ್ಯಾರಂಟಿ ಯೋಜನೆಗಳಿಗೆ ಎಸ್ ಸಿ ಎಸ್ ಪಿ ಮತ್ತು ಟಿ ಎಸ್ ಪಿ ಗೆ ಬಜೆಟ್ ನಲ್ಲಿ ಮೀಸಲಿಟ್ಟಿದ್ದ ಒಟ್ಟು ಹಣದಲ್ಲಿ 14,282 ಕೋಟಿ ಹಣವನ್ನು ಬಳಸಿಕೊಳ್ಳೋದಕ್ಕೆ ಅನುಮತಿ ನೀಡಿದೆ ಎನ್ನುವ ವಿಚಾರ ಬಯಲಾಗಿದೆ. 2024-25ನೇ ಆರ್ಥಿಕ ವರ್ಷದಲ್ಲಿ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಅಡಿಯಲ್ಲಿ ಮೀಸಲಿಟ್ಟ 39,121.46 ಕೋಟಿ ರೂ. ಹಣವನ್ನು ಖರ್ಚು ಮಾಡುವ ಪ್ರಸ್ತಾವನೆಯ ಕ್ರಿಯಾ ಯೋಜನೆಗೆ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ರಾಜ್ಯ ಅಭಿವೃದ್ಧಿ ಪರಿಷತ್ ಶುಕ್ರವಾರ ಅನುಮೋದನೆ ನೀಡಿದೆ.
ಎಸ್ ಸಿ ಎಸ್ ಪಿ ಹಾಗೂ ಟಿ ಎಸ್ ಪಿ ಯೋಜನೆಯ 14,282 ಕೋಟಿ ಹಣದಲ್ಲಿ ಯುವನಿಧಿ 175 ಕೋಟಿ ರೂ, ಶಕ್ತಿ ಯೋಜನೆಗೆ 1451 ಕೋಟಿ ರೂ, ಗೃಹ ಲಕ್ಷ್ಮೀ ಯೋಜನೆಗೆ 7,881 ಕೋಟಿ ರೂ, ಅನ್ನಭಾಗ್ಯ ನಗದು ಹಣ ವರ್ಗಾವಣೆಗೆ 2,187 ಕೋಟಿ ರೂ ಹಾಗೂ ಗೃಹ ಜ್ಯೋತಿ ಯೋಜನೆಗೆ 2,585 ಕೋಟಿ ರೂ ಮೀಸಲಿಡಲು ನಿರ್ಧರಿಸಿದೆ.
ಒಟ್ಟಿನಲ್ಲಿ ಪರಿಶಿಷ್ಟರ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳಲು ಮುಂದಾದ ಸರ್ಕಾರದ ವಿರುದ್ಧ ಹೋರಾಟ ನಡೆಸಲು ಬಿಜೆಪಿಗೆ ಪ್ರಬಲ ಅಸ್ತ್ರ ಸಿಕ್ಕಂತಾಗಿದೆ.

                        

                          

                        

                          

 

Leave a Reply

Your email address will not be published. Required fields are marked *