Share this news

ಉಡುಪಿ : ಬ್ರಹ್ಮಾವರದಲ್ಲಿ ಈಗ ಕಾರ್ಯಾಚರಿಸುತ್ತಿರುವ ಸಂಚಾರಿ ನ್ಯಾಯಾಲಯದಲ್ಲಿ ಅಗಾಧ ಸಂಖ್ಯೆಯಲ್ಲಿ ಪ್ರಕರಣಗಳು ಬಾಕಿ ಇರುವುದರಿಂದ ಆದಷ್ಟು ಶೀಘ್ರದಲ್ಲಿ ಬ್ರಹ್ಮಾವರಕ್ಕೆ ಖಾಯಂ ನ್ಯಾಯಾಲಯವನ್ನು ಮಂಜೂರು ಮಾಡುವಂತೆ ಉಡುಪಿ ವಕೀಲರ ಸಂಘದ ನಿಯೋಗ ಬೆಂಗಳೂರಿನಲ್ಲಿ ರಾಜ್ಯ ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿ ಆಗ್ರಹಿಸಿದೆ.

ಅಧ್ಯಕ್ಷ ರೆನೋಲ್ಡ್ ಪ್ರವೀಣ್‌ಕುಮಾರ್ ನೇತೃತ್ವದಲ್ಲಿ ಉಡುಪಿ ವಕೀಲರ ಸಂಘದ ನಿಯೋಗವೊಂದು ಕರ್ನಾಟಕ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್. ಕೆ. ಪಾಟೀಲ್‌ರನ್ನು ಬೆಂಗಳೂರಿನ ವಿಧಾನಸೌಧದಲ್ಲಿ ಭೇಟಿಯಾಗಿ ಈ ಬಗ್ಗೆ ಚರ್ಚೆ ನಡೆಸಿತು.

                       in 

Leave a Reply

Your email address will not be published. Required fields are marked *