Share this news

ಕಾರ್ಕಳ: ಜೂನ್ 2025 ರಲ್ಲಿ ಕೇಂದ್ರ ಸರ್ಕಾರದ 11 ವರ್ಷಗಳು ಪೂರ್ಣಗೊಳ್ಳುತ್ತಿರುವ ಹಿನ್ನಲೆಯಲ್ಲಿ ಸರ್ಕಾರದ ಸಾಧನೆಗಳನ್ನು ಹಾಗೂ ಯೋಜನೆಗಳ ಲಾಭವನ್ನು ಜನರಿಗೆ ತಲುಪಿಸುವ ಉದ್ದೇಶದಿಂದ ಸೇವೆ, ಸುಶಾಸನ, ಬಡವರ ಕಲ್ಯಾಣ ಹಾಗೂ ವಿಕಸಿತ ಭಾರತದ ಪರಿಕಲ್ಪನೆಯುಳ್ಳ ಕಾರ್ಯಕ್ರಮಗಳನ್ನು ಆಯೋಜಿಸಲು ಉದ್ದೇಶಿಸಲಾಗಿದೆ.

ಈ ಪ್ರಯುಕ್ತ ಕಾರ್ಕಳ ಬಿಜೆಪಿ ವತಿಯಿಂದ ವಿಕಾಸ ಜನಸೇವಾ ಕಛೇರಿಯಲ್ಲಿ ಜೂನ್ 16 ಬೆಳಿಗ್ಗೆ 10.00 ಗಂಟೆಗೆ ವಿಕಸಿತ ಭಾರತ ಸಂಕಲ್ಪ ಸಭೆಯನ್ನು ಆಯೋಜಿಸಲಾಗಿದೆ. ಈ ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್ ಮತ್ತು ಶಾಸಕರಾದ ವಿ ಸುನಿಲ್ ಕುಮಾರ್ ಉಪಸ್ಥಿತಲಿರಲಿದ್ದು ವಿಕಸಿತ ಭಾರತ 2047 ರ ದೃಷ್ಟಿಕೋನ ಹಾಗೂ ಅದರಲ್ಲಿ ನಮ್ಮ ಪಾತ್ರದ ಕುರಿತು ಕಾರ್ಯಗಾರ ನಡೆಯಲಿದೆ ಎಂದು ಬಿಜೆಪಿ ಕ್ಷೇತ್ರಾಧ್ಯಕ್ಷರಾದ ನವೀನ್ ನಾಯಕ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

 

 

 

 

 

Leave a Reply

Your email address will not be published. Required fields are marked *