Share this news

ನವದೆಹಲಿ: ಕಳೆದ 10 ವರ್ಷಗಳ ಹಿಂದೆ ಜಾತಿಗಣತಿ ಸಮೀಕ್ಷೆ ನಡೆದಿದೆ. ನಮ್ಮ ಸರ್ಕಾರ ನಡೆಸಿದ ಜಾತಿ ಗಣತಿಯ ಕುರಿತು ಕೆಲವರು ಅಪಸ್ವರ ಎತ್ತಿದ್ದಾರೆ. ಈ ಹಿನ್ನಲೆಯಲ್ಲಿ ಕರ್ನಾಟಕದಲ್ಲಿ ಮತ್ತೊಮ್ಮೆ ಜಾತಿಗಣತಿ ಸಮೀಕ್ಷೆ ನಡೆಸುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಘೋಷಿಸಿದ್ದಾರೆ.
ನವದೆಹಲಿಯಲ್ಲಿ ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿನ ಬೆಳವಣಿಗೆ ಬಗ್ಗೆ ರಾಹುಲ್ ಗಾಂಧಿ ಜೊತೆಗೆ ಚರ್ಚೆ ಮಾಡಲಾಯಿತು.ಮುಖ್ಯವಾಗಿ ಜಾತಿಗಣತಿ ಬಗ್ಗೆ ಸಭೆಯಲ್ಲಿ ಚರ್ಚೆ ಮಾಡಿದರು ಎಂದರು.

ನಮ್ಮಲ್ಲಿ ಕೆಲವರು ವರದಿಗೆ ಅಪಸ್ವರ ಎತ್ತಿರುವ ಕುರಿತು ಚರ್ಚೆಯಾಯಿತು. ಹಾಗಾಗಿ ಮತ್ತೊಮ್ಮೆ ಜಾತಿ ಗಣತಿ ಮಾಡಲು ರಾಹುಲ್ ಗಾಂಧಿ ಸೂಚಿಸಿದ್ದಾರೆ .ಆದ್ದರಿಂದ ಮತ್ತೊಮ್ಮೆ ನಮ್ಮ ಸರ್ಕಾರ ಜಾತಿಗಣತಿ ಸಮೀಕ್ಷೆಗೆ ಒಪ್ಪಿಗೆ ನೀಡಿದೆ. 90 ದಿನದೊಳಗೆ ಜಾತಿಗಣತಿ ಸಮೀಕ್ಷೆ ಮುಗಿಯಲಿದೆ ಎಂದು ಸಿಎಂ ತಿಳಿಸಿದ್ದಾರೆ

 

 

 

 

 

Leave a Reply

Your email address will not be published. Required fields are marked *