Share this news

ಉಡುಪಿ : ಉಡುಪಿ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಆಂಗ್ಲ ಭಾಷಾ ಉಪನ್ಯಾಸಕರ ಒಂದು ದಿನದ ಕಾರ್ಯಾಗಾರವು ಇಂಗ್ಲಿಷ್‌ಫೋರಮ್ ಹಾಗೂ ಮಣಿಪಾಲ ಜ್ಞಾನಸುಧಾ ಪದವಿ ಪೂರ್ವಕಾಲೇಜಿನ ಸಹಯೋಗದಲ್ಲಿ ಮಣಿಪಾಲ ಜ್ಞಾನಸುಧಾ ವಿದ್ಯಾನಗರ ಕ್ಯಾಂಪಸ್‌ನಲ್ಲಿ ಜರುಗಿತು.

ಸಂಪನ್ಮೂಲ ವ್ಯಕ್ತಿಯಾಗಿಕೆ.ಎಲ್.ಕೆ ಪಿ.ಯು.ಕಾಲೇಜು ಬೀರೂರು ಚಿಕ್ಕಮಗಳೂರಿನ ಆಂಗ್ಲ ಭಾಷಾ ಉಪನ್ಯಾಸಕಿ ಶ್ರೀಮತಿ ಭಾಗ್ಯಮ್ಮ ಜಿ.ವಿ. ಉದ್ಘಾಟಿಸಿ, ತರಬೇತಿ ನೀಡಿದರು.

ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಸಿ.ಇ.ಒ ಹಾಗೂ ಉಡುಪಿ ಜಿಲ್ಲಾ ಅನುದಾನಿತ ಹಾಗೂ ಅನುದಾನರಹಿತ ಪ.ಪೂ. ಕಾಲೇಜುಗಳ ಪ್ರಾಂಶುಪಾಲರ ಸಂಘ ದಅಧ್ಯಕ್ಷರಾದ ದಿನೇಶ್ ಎಂ ಕೊಡವೂರು ಅಧ್ಯಕ್ಷತೆ ವಹಿಸಿದ್ದರು.

ಇದೇ ಸಂದರ್ಭದಲ್ಲಿಎಸ್.ವಿ.ಎಚ್. ಪದವಿ ಪೂರ್ವ ಕಾಲೇಜು ಇನ್ನಂಜೆಯ ನಿವೃತ್ತ ಪ್ರಾಂಶುಪಾಲರಾದ ಪುಂಡರೀಕಾಕ್ಷ ಕೊಡಂಚ ಇವರನ್ನು ಸನ್ಮಾನಿಸಲಾಯಿತು.

ಆತಿಥೇಯ ಕಾಲೇಜಿನ ಪ್ರಾಂಶುಪಾಲರಾದ ಗಣೇಶ್ ಶೆಟ್ಟಿ, ಇಂಗ್ಲಿಷ್ ಫೋರಮ್ ನ ಅಧ್ಯಕ್ಷರಾದ ಶಿವಪ್ರಸಾದ್ ಶೆಟ್ಟಿಗಾರ್, ಕಾರ್ಯದರ್ಶಿ ಗಂಗಾಧರ್‌ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಉಪನ್ಯಾಸಕಿ ಶಮಿತ ಕಾರ್ಯಕ್ರಮ ನಿರೂಪಿಸಿದರು.

                        

                          

                        

                          

 

`

Leave a Reply

Your email address will not be published. Required fields are marked *