ಬೆಂಗಳೂರು : ಭಾನುವಾರ ಸಂಜೆ ವೇಳೆ ನಗರದಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಿದ್ದು ಹಲವೆಡೆ ಮಳೆಯಿಂದ ಅವಾಂತರ ಸೃಷ್ಟಿಯಾಗಿದೆ.
ಕಿನೋ ಟಾಕೀಸ್ ಬಳಿ ಅಂಡರ್ ಪಾಸ್ ನಲ್ಲಿ ಬಿಎಂಟಿಸಿ ಬಸ್ ಮುಳುಗಡೆಯಾದ ಹಿನ್ನೆಲೆಯಲ್ಲಿ ಬಸ್ ನಲ್ಲಿದ್ದ ಎಲ್ಲಾ ಪ್ರಯಾಣಿಕರನ್ನು ಸುರಕ್ಷಿತವಾಗಿ ಹೊರ ಕರೆತರಲಾಯಿತು.ನೆಲಮಂಗಲದಿಂದ ಮೆಜೆಸ್ಟಿಕ್ ಗೆ ಬರುತ್ತಿದ್ದ ಬಸ್ ಭಾರೀ ಮಳೆಗೆ ಸಂಪೂರ್ಣ ಮುಳುಗಡೆಯಾಗಿದೆ. ಪ್ರತಿಬಾರಿ ಮಳೆ ಬಂದಾಗಲೂ ಈ ಅಂಡರ್ ಪಾಸ್ ಸಂಪೂರ್ಣವಾಗಿ ಜಲಾವೃತವಾಗುತ್ತದೆ.ಹಲವು ಬಾರಿ ರಸ್ತೆಯನ್ನು ದುರಸ್ತಿ ಮಾಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಇದೀಗ ಬಸ್ ನಲ್ಲಿ ಸಿಲುಕಿದ್ದ ಸ್ತ್ರೀಯರು ಮಕ್ಕಳು ಸೇರಿದಂತೆ ಎಲ್ಲರನ್ನು ಚಾಲಕ ಮತ್ತು ನಿರ್ವಾಹಕ ಸ್ಥಳೀಯರ ನೆರವನಿಂದ ರಕ್ಷಣೆ ಮಾಡಿದ್ದಾರೆ.
ಇದಲ್ಲದೇ ಗಾಳಿ ಮಳೆಯಿಂದಾಗಿ ಟ್ರಿನಿಟಿ ಎಂಬಿ ರಸ್ತೆ ಮೆಟ್ರೋ ನಿಲ್ದಾಣದ ನಡುವಿನ ಟ್ರ್ಯಾಕ್ ಮೇಲೆ ಮರದ ಕೊಂಬೆಗಳು ಬಿದ್ದ ಪರಿಣಾಮ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ ಉಂಟಾಯಿತು