Share this news

ಮೈಸೂರು: ಮುಡಾ 50:50 ಅನುಪಾತದಲ್ಲಿ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎನ್ನುವ ಆರೋಪ ಕೇಳಿಬಂದಿದ್ದು, ಈ ಪ್ರಕರಣದಲ್ಲಿ ಇಡಿ  ಪ್ರವೇಶಿಸಿದೆ. ಈಗಾಗಲೇ ಹಲವರಿಗೆ ನೋಟಿಸ್ ನೀಡಿ ಮಹತ್ವದ ಮಾಹಿತಿ ಕಲೆ ಹಾಕುತ್ತಿದೆ. ಇದರ ನಡುವೆ, ಇಡಿ ಅಧಿಕಾರಿಗಳು ಬೆಂಗಳೂರಿನ ಜೆ.ಪಿ‌.ನಗರದಲ್ಲಿರುವ ಬಿಲ್ಡರ್​ ಎನ್​. ಮಂಜುನಾಥ್​ ಮನೆ ಮೇಲೆ ದಾಳಿ ಮಾಡಿದೆ. ಇದರ ಬೆನ್ನಲ್ಲೇ ಇದೀಗ ಮುಡಾ ಮಾಜಿ ಆಯುಕ್ತ ನಟೇಶ್ ಮನೆ ಮೇಲೆ ಸಹ ಇಡಿ ದಾಳಿಯಾಗಿದ್ದು, ಇತ್ತ ಪ್ರಕರಣ ಎ1 ಆರೋಪಿಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯಗೂ ಸಹ ಯಾವಾಗ ಇಡಿ ದಾಳಿ ಆಗುತ್ತೋ ಎನ್ನುವ ಆತಂಕದಲ್ಲಿದ್ದಾರೆ.

ಇಡಿ ಅಧಿಕಾರಿಗಳು ಅಕ್ಟೋಬರ್ 18 ಮುಡಾ ಕಚೇರಿ ಸೇರಿದಂತೆ ಮೈಸೂರಿನ ಇತರ ಕೆಲವು ಸ್ಥಳಗಳ ಮೇಲೆ ದಾಳಿ ಮಾಡಿದ್ದರು. ದಾಳಿ ಬಳಿಕ, ಇಡಿ ಅಧಿಕಾರಿಗಳು ಮುಡಾದ ಆರು ಅಧಿಕಾರಿಗಳನ್ನು ವಿಚಾರಣೆಗೆ ಒಳಪಡಿಸಿದ್ದರು. ಈ ಅಧಿಕಾರಿಗಳಿಂದ ಅಗತ್ಯ ಮಾಹಿತಿ ಸಂಗ್ರಹಿಸಿದ್ದರು. ಅಧಿಕಾರಿಗಳು ಕಳೆದ ವಾರ ಬೆಂಗಳೂರಿನ ಇಡಿ ಕಚೇರಿಯಲ್ಲಿ ಮುಡಾದ ಕೆಲವು ಕೆಳಹಂತದ ಅಧಿಕಾರಿಗಳನ್ನು ವಿಚಾರಣೆ ನಡೆಸಿದ್ದರು.

ಇಡಿ ಅಧಿಕಾರಿಗಳು ಆರ್ಟಿಐ ಕಾರ್ಯಕರ್ತ ಗಂಗರಾಜು ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದ್ದರು. ಅದರಂತೆ ಆರ್ಟಿಐ ಕಾರ್ಯಕರ್ತ ಗಂಗರಾಜು ಇಂದು (ಅ.28) ಬೆಂಗಳೂರು ಇಡಿ ಕಚೇರಿಗೆ ತೆರಳಿದ್ದು, ವಿಚಾರಣೆಗೆ ಹಾಜರಾಗಿದ್ದಾರೆ. ಇದೀಗ ಈ ಎಲ್ಲ ಘಟನೆಗಳು ಪ್ರಕರಣದ ಸತ್ಯಾಂಶದ ಬೆನ್ನತ್ತಿದೆ ಎಂದು ಕಾಣುತ್ತಿದೆ.

 

 

Leave a Reply

Your email address will not be published. Required fields are marked *