ಬೆಂಗಳೂರು: ಈಗಾಗಲೇ ಬಸ್ ಟಿಕೆಟ್ ದರ ಹೆಚ್ಚಳ, ಮೆಟ್ರೋ ಪ್ರಯಾಣ ದರ ಹೆಚ್ಚಳ ಸೇರಿದಂತೆ ಬೆಲೆ ಏರಿಕೆಯಿಂದ ಕಂಗಾಲಾಗಿರುವ ರಾಜ್ಯದ ಜನತೆಗೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಮತ್ತೊಂದು ಶಾಕ್ ನೀಡಿದೆ. ವಿದ್ಯುತ್ ದರ ಪ್ರತೀ ಯೂನಿಟ್ಗೆ 36 ಪೈಸೆ ಹೆಚ್ಚಳ ಮಾಡಿ ಆದೇಶಿಸಿದೆ. ಕೆಪಿಟಿಸಿಎಲ್ ಹಾಗೂ ಎಸ್ಕಾಂಗಳ ನೌಕರರ ಪಿಂಚಣಿ ಹಾಗೂ ಗ್ರಾö್ಯಚ್ಯುಟಿ ಹೆಚ್ಚಳಕ್ಕೆ ಗ್ರಾಹಕರಿಗೆ ದರ ಏರಿಕೆಯ ಬರೆ ಹಾಕಿದ್ದು ಜನಸಾಮಾನ್ಯರಿಗೆ ಮತ್ತೆ ಬೆಲೆ ಏರಿಕೆ ಬಿಸಿ ತಟ್ಟಲಿದೆ
ರಾಜ್ಯದ ಐದು ವಿದ್ಯುತ್ ನಿಗಮಗಳಾದ ಬೆಸ್ಕಾಂ, ಮೆಸ್ಕಾಂ, ಚೆಸ್ಕಾಂ, ಜೆಸ್ಕಾಂ ಹಾಗೂ ಹೆಸ್ಕಾಂ ಸೇರಿದಂತೆ ಐದು ಕಂಪನಿಗಳು ವಿದ್ಯುತ್ ಪ್ರತಿ ಯುನಿಟ್ ದರ ಏರಿಸುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದವು. ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (ಕೆಇಆರ್ಸಿ) ವಿದ್ಯುತ್ ಸರಬರಾಜು ಕಂಪನಿಗಳು (ಎಸ್ಕಾಮ್ಗಳು) ಸಲ್ಲಿಸಿದ ಸುಂಕ ಹೆಚ್ಚಳ ಪ್ರಸ್ತಾವನೆಗೆ ಸರ್ಕಾರ ಅನುಮೋದನೆ ನೀಡಿದ್ದು ನೂತನ ಪರಿಷ್ಕೃತ ದರವು ಏಪ್ರಿಲ್ 1 ರಿಂದ ಜಾರಿಗೆ ಬರಲಿದ್ದು, ಈಗಾಗಲೇ ಹೆಚ್ಚಿದ ಬಸ್ ಮತ್ತು ಮೆಟ್ರೋ ದರಗಳನ್ನು ಎದುರಿಸುತ್ತಿರುವ ಗ್ರಾಹಕರಿಗೆ ಮತ್ತಷ್ಟು ಆರ್ಥಿಕ ಹೊರೆ ಹೆಚ್ಚಾಗಲಿದೆ.
K