
ಅವರು ಇಂದು ತೋಟಗಾರಿಕೆ ಇಲಾಖೆ ಕಾರ್ಕಳ, ಮಾಳ-ಕೆರ್ವಾಶೆ ವ್ಯವಸಾಯ ಸೇವಾ ಸಹಕಾರಿ ಸಂಘ,ನಿ. ಮಾಳ ಹಾಗೂ ಬಿಲ್ಲವ ಸಮಾಜ ಸೇವಾ ಸಂಘ. ರಿ. ಬಜಗೋಳಿ ಇವರ ಜಂಟಿ ಸಹಯೋಗದಲ್ಲಿ ಇಂದು ಬಜಗೋಳಿ ಶ್ರೀ ಬ್ರಹ್ಮಶ್ರೀ
ನಾರಾಯಣಗುರು ಸಮುದಾಯ ಭವನದಲ್ಲಿ ಜರುಗಿದ ಅಡಿಕೆ ಬೆಳೆ ಎಲೆಚುಕ್ಕೆ ರೋಗ ಹಾಗೂ ಅಡಿಕೆ ಬೆಳೆ ಸಮಗ್ರ ನಿರ್ವಹಣೆ ಕುರಿತು ನಡೆದ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾಳ – ಕೆರ್ವಾಶೆ ವ್ಯವಸಾಯ ಸೇವಾ ಸಹಕಾರಿ ಸಂಘ ದ ಅಧ್ಯಕ್ಷ ಕೃಷ್ಣ ಶೆಟ್ಟಿ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಕಾರ್ಕಳ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅಜಿತ್ ಹೆಗ್ಡೆ, ರವರು, ಮುಡಾರು ಪಂಚಾಯತ್ ಉಪಾಧ್ಯಕ್ಷ ಅರುಣ್ ಕುಮಾರ್ ಶೆಟ್ಟಿ, ಮಾಳ – ಕೆರ್ವಾಶೆ ವ್ಯವಸಾಯ ಸೇವಾ ಸಹಕಾರಿ ಸಂಘದ ಉಪಾಧ್ಯಕ್ಷ ನಾಗೇಶ ಭಂಡಾರಿ, ಮಾಳ ರವರು, ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಭಾಸ್ಕರ ಪೂಜಾರಿ, ಮಾಳ ಪಂಚಾಯತ್ ಅಧ್ಯಕ್ಷ ಉಮೇಶ ಪೂಜಾರಿ, ನಲ್ಲೂರು ಪಂಚಾಯತ್ ಅಧ್ಯಕ್ಷ ಅಶೋಕ ಪೂಜಾರಿ, ಕೆರ್ವಾಶೆ ಪಂಚಾಯತ್ ಅಧ್ಯಕ್ಷೆ ಸುನಿತಾ ಪೂಜಾರಿ ಉಪಸ್ಥಿತರಿದ್ದರು.
ತರಬೇತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಡಾ// ವಿನಾಯಕ ಹೆಗಡೆ, ಸಸ್ಯರೋಗ ತಜ್ಞರು, ಕೇಂದ್ರೀಯ ತೋಟದ ಬೆಳೆಗಳ ಸಂಶೋಧನಾ ಸಂಸ್ಥೆ, ಕಾಸರಗೋಡು ಅವರು ಅಡಿಕೆ
ಬೆಳೆಗೆ ತಗಲುವ ಎಲೆ ಚುಕ್ಕೆ ರೋಗ ಹಾಗೂ ವಿವಿಧ ರೋಗಗಳ ಕುರಿತು ಮಾಹಿತಿ ನೀಡಿದರು. ಡಾ// ಚೈತನ್ಯ,
ತೋಟಗಾರಿಕೆ ತಜ್ಞರು, ವಲಯ ಕೃಷಿ ಹಾಗೂ ತೋಟಗಾರಿಕೆ ಸಂಶೋಧನಾ ಕೇಂದ್ರ, ಬ್ರಹ್ಮಾವರ ಅವರು, ಅಡಿಕೆ
ಸಮಗ್ರ ನಿರ್ವಹಣೆ ಕುರಿತು ಹಾಗೂ ಡಾ// ರೇವಣ್ಣ ರೇವಣ್ಣನವರ್, ಕೀಟ ಶಾಸ್ತ್ರ ತಜ್ಞರು, ವಲಯ ಕೃಷಿ ಹಾಗೂ
ತೋಟಗಾರಿಕೆ ಸಂಶೋಧನಾ ಕೇಂದ್ರ, ಬ್ರಹ್ಮಾವರ ರವರು ಅಡಿಕೆ ಕೀಟದ ಬಗ್ಗೆ ಮಾಹಿತಿ ನೀಡಿದರು.
ಹಿರಿಯ ಸಹಾಯಕ ತೊಟಗಾರಿಕೆ ನಿರ್ದೇಶಕರಾದ ಶ್ರೀನಿವಾಸ ಬಿ.ವಿ ಸ್ವಾಗತಿಸಿ ಪ್ರಸ್ತಾವನೆಗೈದರು. ಅನಿಲ್ ಎಸ್ ಪೂಜಾರಿ ವಂದಿಸಿದರು. ಮಾಳ-ಕೆರ್ವಾಶೆ, ವ್ಯ.ಸೇ.ಸಂಘದ ಮುಖ್ಯ
ಕಾರ್ಯ ನಿರ್ವಹಣಾಧಿಕಾರಿ ನವೀನ್ ಎಮ್ ಸುವರ್ಣ ಕಾರ್ಯಕ್ರಮ ನಿರೂಪಿಸಿದರು.
.
.
