Share this news

 

 

 

ಮಂಗಳೂರು: ಮಂಗಳೂರಿನಲ್ಲಿ ನಡೆದಿದ್ದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ಕುರಿತಂತೆ ಮಂಗಳೂರು ಪೊಲೀಸ್ ಆಯುಕ್ತರು ಮಹತ್ವದ ಹೇಳಿಕೆ ನೀಡಿದ್ದಾರೆ. ಗೃಹ ಸಚಿವ ಪರಮೇಶ್ವರ್ ಜೊತೆ ಸಭೆ ನಡೆಸಿದ ನಂತರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಸುದ್ಧಿಗಾರ ಜತೆ ಮಾತನಾಡಿ, ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಎಂಟು ಮಂದಿಯನ್ನು ಬಂಧಿಸಲಾಗಿದೆ.

ಮಂಗಳೂರು ಬಜಪೆ ಕಿನ್ನಿಪದವು ನಿವಾಸಿ ಅಬ್ದುಲ್ ಸಫ್ವಾನ್( 29), ಮಂಗಳೂರು ಬಜ್ಪೆ ಶಾಂತಿಗುಡ್ಡೆ ಬಳಿಯ ನಿವಾಸಿ ನಿಯಾಝ್ (28), ಮಂಗಳೂರು ಕೆಂಜಾರು ನಿವಾಸಿ ಮೊಹಮ್ಮದ್ ಮುಝಾಮಿಲ್ (32), ಮಂಗಳೂರು ಕಳವಾರು ನಿವಾಸಿ ಕಲಂದರ್ ಶಾಫಿ (31), ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ರುದ್ರ ಪಾದ ನಿವಾಸಿ ರಂಜಿತ್ (19), ಚಿಕ್ಕಮಗಳೂರು ಜಿಲ್ಲೆಯ ಕಳಸ ಕೋಟೆ ಹೊಳೆ ಮಾವಿನಕೆರೆ ಗ್ರಾಮದ ನಾಗರಾಜ್ (20),ಮಂಗಳೂರು ಜೋಕಟ್ಟೆ ನಿವಾಸಿ ಮೊಹಮ್ಮದ್ ರಿಜ್ವಾನ್ (28), 2022ರಲ್ಲಿ ಕೊಲೆಯಾದ ಫಾಝಿಲ್ ಸಹೋದರ್ ಆದಿಲ್ ಮೊಹರೂಫ್ ಬಂಧಿತರು.

ಈ ಹಿಂದೆ ಕೊಲೆಯಾಗಿದ್ದ ಫಾಜಿಲ್ ಸಹೋದರ ಆದಿಲ್ ಮೊಹರೂಫ್ ಎಂಬಾತ ಸುಹಾಸ್ ಶೆಟ್ಟಿ ಕೊಲೆಗೆ ಸಂಚು ಹೂಡಿದ್ದು, 5 ಲಕ್ಷ ಸುಪಾರಿ ನೀಡಿದ್ದಾಗಿ ತಿಳಿಸಿದ್ದಾರೆ. ಇದರೊಂದಿಗೆ, ಅಣ್ಣ ಫಾಝಿಲ್ ಹತ್ಯೆ ಪ್ರತೀಕಾರಕ್ಕಾಗಿ ಆದಿಲ್ ಸುಹಾಸ್ ಶೆಟ್ಟಿ ಕೊಲೆಗೆ ಇಬ್ಬರು ಹಿಂದೂ ಯುವಕರನ್ನು ಬಳಸಿಕೊಂಡು ಪ್ರಕರಣವನ್ನು ತಿರುಚಲು ಖತರ್ನಾಕ್ ಪ್ಲಾನ್ ಮಾಡಿದ್ದಾನೆ ಎನ್ನಲಾಗಿದೆ.

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ 8 ಆರೋಪಿಗಳಲ್ಲಿ ಅಬ್ದುಲ್ ಸಫ್ವಾನ್ ಪ್ರಮುಖ ಆರೋಪಿಯಾಗಿದ್ದು,ಕಳೆದ 2023ರಲ್ಲಿ ಅಬ್ದುಲ್ ಸಫ್ವಾನ್ ಮೇಲೆ ಮಾರಣಾಂತಿಕ ಹಲ್ಲೆ ಆಗಿತ್ತು.ಇತ್ತ ಸಫ್ವಾನ್‌ಗೆ ತನ್ನನ್ನು ಸುಹಾಸ್ ಶೆಟ್ಟಿ ಕೊಲೆ ಮಾಡುವ ಭಯ ಕಾಡುತ್ತಿತ್ತು ಈ ಹಿನ್ನೆಲೆಯಲ್ಲಿ ಸುಹಾಸ್ ಶೆಟ್ಟಿಯನ್ನು ಮುಗಿಸಲು ತೀರ್ಮಾನಿಸಿದ್ದ. ಅದಕ್ಕಾಗಿ ಫಾಜಿಲ್ ತಮ್ಮನನ್ನು ಸಂಪರ್ಕಿಸಿ ಕೊಲೆಯ‌ ಸ್ಕೆಚ್ ಹಾಕಿದ್ದರು. ಇತ್ತ ಆದಿಲ್ ಈ ಹತ್ಯೆಗೆ ಸಫ್ವಾನ್ ತಂಡಕ್ಕೆ ಬರೋಬ್ಬರಿ 5 ಲಕ್ಷ ರೂ. ಫಂಡಿಂಗ್ ಮಾಡಿದ್ದ. ನಿಯಾಜ್ ಸ್ನೇಹಿತರಾದ ನಾಗರಾಜ್ ಮತ್ತು ರಂಜಿತ್ ಸಂಪರ್ಕ ಮಾಡುತ್ತಾರೆ. ಈ ಇಬ್ಬರು ಸಫ್ವಾನ್ ಮನೆಯಲ್ಲಿ ಎರಡು ದಿನಗಳ ಕಾಲ ವಾಸವಿದ್ದರು. ಮೇ 1ರಂದು ಸುಹಾಸ್ ಶೆಟ್ಟಿಯ ಚಲನವಲನ ಗಮನಿಸಿ ಕೊಲೆ ಮಾಡಿದ್ದಾರೆ ಎಂದು  ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ತಿಳಿಸಿದರು.

 

 

 

 

 

 

 

 

 

Leave a Reply

Your email address will not be published. Required fields are marked *