ಮಂಗಳೂರು: ಪ್ರಸಿದ್ದ ನಾಗಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇ ವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಮಾಜಿ ರೌಡಿಶೀಟರ್ ಹರೀಶ್ ಇಂಜಾಡಿ ನೇಮಕವಾಗಿದ್ದು, ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ. ಸಚಿವ ದಿನೇಶ್ ಗುಂಡುರಾವ್ ಅವರ ಶಿಫಾರಸಿನ ಮೇರೆಗೆ ಈ ನೇಮಕವಾಗಿದ್ದು, ಹರೀಶ್ ಅವರ ವಿರುದ್ಧ ಹಲವು ಆರೋಪಗಳಿವೆ. ಇದರಿಂದ ದೇವಸ್ಥಾನದ ಹಿತಾಸಕ್ತಿಗೆ ಧಕ್ಕೆಯಾಗಿದೆ ಎಂದು ಗ್ರಾಮಸ್ಥರು ಆಕ್ಷೇಪಿಸಿದ್ದಾರೆ.
ಈ ಅಧ್ಯಕ್ಷ ಸ್ಥಾನಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮತ್ತು MLC ಮಂಜುನಾಥ ಭಂಡಾರಿ ಕಾಂಗ್ರೆಸ್ ಮುಖಂಡ ಅವರು ಹರೀಶ್ ಇಂಜಾಡಿ ಹೆಸರನ್ನು ಶಿಫಾರಸ್ಸು ಮಾಡಿದ್ದರು.
ಆದರೆ ಕಾಂಗ್ರೆಸ್ ಮುಖಂಡ ಕಂ ಗ್ರಾಮ ಪಂಚಾಯಿತಿ ಸದಸ್ಯ ಹರೀಶ್ ಇಂಜಾಡಿ ಮೇಲೆ ನಕಲಿ ಚೆಕ್ ನೀಡಿ ಹಣ್ಣು-ಕಾಯಿ ಟೆಂಡರ್ ಮಾಡಿ ದೇಗುಲ ಆಡಳಿತ ಮಂಡಳಿಗೆ ವಂಚನೆ ಮಾಡಿರುವ ಆರೋಪ ಇರುವ ಹಿನ್ನಲೆಯಲ್ಲಿ ಗ್ರಾಮಸ್ಥರು ಅವರ ಆಯ್ಕೆಯನ್ನು ವಿರೋಧಿಸಿದ್ದರು.
ಇದೀಗ ಅಧ್ಯಕ್ಷರಾಗಿ ಹರೀಶ್ ಇಂಜಾಡಿ ಆಯ್ಕೆ ಬೆನ್ನಲ್ಲೇ ಆಕ್ರೋಶ ವ್ಯಕ್ತವಾಗಿದೆ. ಸಾಮಾಜಿಕ ತಾಣಗಳಲ್ಲಿ ಕಾಂಗ್ರೆಸ್ ವಿರುದ್ದ ಬಿಜೆಪಿ ಆಕ್ರೋಶ ಹೊರಹಾಕಿದೆ. ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಯಾದಾಗ ರೌಡಿ ಶೀಟರ್ ಎಂದಿದ್ದ ಕಾಂಗ್ರೆಸ್. ರೌಡಿಶೀಟರ್ ಆದ ಕಾರಣ ಸುಹಾಸ್ ಮನೆಗೆ ಭೇಟಿ ನೀಡಲ್ಲ ಎಂದು ಪರಮೇಶ್ವರ್, ದಿನೇಶ್ ಗುಂಡೂರಾವ್ ಹೇಳಿದ್ದರು. ಆದರೆ ಇದೀಗ ಗುಂಡೂರಾವ್ ಶಿಫಾರಸ್ಸಿನಂತೆ ಮಾಜಿ ರೌಡಿಶೀಟರ್ಗೆ ಕುಕ್ಕೆ ಅಧ್ಯಕ್ಷ ಪಟ್ಟ ನೀಡಿದ್ದಾರೆ ಎಂದು ಬಿಜೆಪಿ ಕಾರ್ಯಕರ್ತರು ಕಿಡಿಕಾರಿದ್ದಾರೆ.