ಕಾರ್ಕಳ: ಜಿಲ್ಲಾ ಮಲೆಕುಡಿಯ ಸಂಘದ ನೂತನ ಅಧ್ಯಕ್ಷರಾಗಿ ಗಂಗಾಧರ ಗೌಡ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಅಶೋಕ ಕೆರ್ವಾಶೆ ಆಯ್ಕೆಯಾಗಿದ್ದಾರೆ.
ಜೂನ್ 29ರಂದು ನಡೆದ ಸಂಘದ 2024-25 ನೇ ಸಾಲಿನ ವಾರ್ಷಿ ಸಭೆಯಲ್ಲಿ ಆಡಳಿತ ಮಂಡಳಿ ಪುನಾರಚನೆಯಾಗಿದ್ದು, ಉಪಾದ್ಯಕ್ಷೆಯಾಗಿ ಶಾರದಾ ಪೇರಡ್ಕ, ಸಹ ಕಾರ್ಯದರ್ಶಿಯಾಗಿ ಚಾಂದಿನಿ ಶಿರ್ಲಾಲು, ಕೋಶಾಧಿಕಾರಿಯಾಗಿ ಸುಂದರಿ ಪೇರಡ್ಕ, ಸಂಘಟನಾ ಕಾರ್ಯದರ್ಶಿಯಾಗಿ ಅಜಿತ್ ಅಂಡಾರು, ಸಹ ಸಂಘಟನಾ ಕಾರ್ಯದರ್ಶಿಯಾಗಿ ಶಶಿಧರ ಕಬ್ಬಿನಾಲೆ, ವಕ್ತಾರರಾಗಿ ದಿನೇಶ್ ಗೌಡ ನೂರಾಳ್ ಬೆಟ್ಟು, ಸಹ ವಕ್ತಾರೆಯಾಗಿ ಸುಜಾತ ಕಬ್ಬಿನಾಲೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.