
ಬೆಂಗಳೂರು,ಮಾ.11: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ವೈದ್ಯಾಧಿಕಾರಿಗಳ ಸಂಘ ಇಂದು ನಡೆಸಬೇಕಿದ್ದ ಮುಷ್ಕರವನ್ನು ಹಿಂಪಡೆದುಕೊಂಡಿದೆ. ಖಾಲಿ ಹುದ್ದೆಗಳ ಭರ್ತಿ ಸೇರಿ 14 ಬೇಡಿಕೆಗಳ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಓಪಿಡಿ ಬಂದ್ ಮಾಡಿ ಸರ್ಕಾರಿ ವೈದ್ಯಾಧಿಕಾರಿಗಳು ಮುಷ್ಕರಕ್ಕೆ ಕರೆ ನೀಡಿದ್ದರು. ಇದರಿಂದ ರಾಜ್ಯದಲ್ಲಿ ಹೆಲ್ತ್ ಎಮರ್ಜೆನ್ಸಿ ಉಂಟಾಗಬಹುದು ಎಂದು ಎಚ್ಚೆತ್ತ ರಾಜ್ಯ ಸರ್ಕಾರ, ವೈದ್ಯಾಧಿಕಾರಿಗಳ ಸಂಘದ ಜತೆ ನಡೆಸಿದ ಸಂಧಾನ ಸಭೆ ಯಶಸ್ವಿಯಾಗಿದೆ.
ನಿನ್ನೆ ಸಂಜೆ ನಡೆದ ಸಂಧಾನ ಸಭೆಯಲ್ಲಿ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಇಟ್ಟಿರುವ 14 ಬೇಡಿಕೆಗಳ ಪೈಕಿ 13 ಬೇಡಿಕೆ ಈಡೇರಿಸುವುದಾಗಿ ರಾಜ್ಯ ಸರ್ಕಾರ ಭರವಸೆ ನೀಡಿದೆ. ಮುಂದಿನ 3 ತಿಂಗಳಲ್ಲಿ ಎಲ್ಲ ಬೇಡಿಕೆ ಈಡೇರಿಸುವುದಾಗಿ ತಿಳಿಸಿದೆ. ಸರ್ಕಾರದ ಈ ಭರವಸೆಗೆ ವೈದ್ಯಾಧಿಕಾರಿಗಳ ಸಂಘ ಸಹ ಒಪ್ಪಿಕೊಂಡಿದ್ದು, ಮುಷ್ಕರ ಹಿಂಪಡೆದುಕೊಂಡಿದೆ. ಇದರಿಂದ ರೋಗಿಗಳು ನಿಟ್ಟುಸಿರುಬಿಡುವಂತಾಗಿದೆ.


.
.
.
.
.
.
.
.
.
.
