ನವದೆಹಲಿ: ಕುಪ್ವಾರಾದಲ್ಲಿ ಭಾರತೀಯ ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಒಬ್ಬ ಭಯೋತ್ಪಾದಕ ಹತ್ಯೆಯಾಗಿದ್ದು ಓರ್ವ ಸೇನಾ ಸಿಬ್ಬಂದಿ ಗಾಯಗೊಂಡಿದ್ದಾರೆ.
ಕೌಚ್ ಪ್ರದೇಶದಲ್ಲಿ ಭಯೋತ್ಪಾದಕರ ಚಲನವಲನಗದ ಬಗ್ಗೆ ಗುಪ್ತಚರ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಯುತ್ತಿದ್ದು ಎರಡನೇ ದಿನಕ್ಕೆ ಕಾಲಿಟ್ಟಿದೆ. ಈ ಹಿಂದೆ ಜುಲೈ 23 ರಂದು ಕುಪ್ವಾರಾದ ತ್ರಿಮುಖ ಟಾಪ್ ನಲ್ಲಿ ಭದ್ರತಾ ಪಡೆಗಳು ಭಯೋತ್ಪಾದಕರ ಜತೆ ತೀವ್ರ ಕಾದಾಟ ನಡೆದಿತ್ತು. ಗುಪ್ತಚರ ಮಾಹಿತಿ ಪ್ರಕಾರ ಈ ಪ್ರದೇಶದಲ್ಲಿ ಎರಡರಿಂದ ಮೂರು ಭಯೋತ್ಪಾದಕರು ಅಡಗಿದ್ದರು. ಭಯೋತ್ಪಾದಕರು ಏಕಾಏಕಿ ಭದ್ರತಾ ಪಡೆಗಳ ಮೇಲೆ ಗುಂಡು ಹಾರಿಸಿದಾಗ ಇದರ ಪರಿಣಾಮವಾಗಿ ಭದ್ರತಾ ಪಡೆಗಳು ಪ್ರತಿದಾಳಿ ನಡೆಸಿ ಓರ್ವನನ್ನು ಹತ್ಯೆಗೈದಿದ್ದಾರೆ.
ಜಮ್ಮುವಿನ ಪೂಂಚ್ ನ ಬಟಾಲ್ ಸೆಕ್ಟರ್ ನಲ್ಲಿ ಜುಲೈ 23 ರಂದು ನಡೆದ ಸಂಬಂಧಿತ ಘಟನೆಯಲ್ಲಿ, ಭಾರತೀಯ ಸೇನೆಯ ಲ್ಯಾನ್ಸ್ ನಾಯಕ್ ಸುಭಾಷ್ ಚಂದರ್ ಅವರು ಜಮ್ಮುವಿನ ಪೂಂಚ್ ನ ಬಟಾಲ್ ಸೆಕ್ಟರ್ ನಲ್ಲಿ ಒಳನುಸುಳುವ ಪ್ರಯತ್ನವನ್ನು ವಿಫಲಗೊಳಿಸುವಾಗ ಗಂಭೀರವಾಗಿ ಗಾಯಗೊಂಡಿದ್ದಾರೆ. ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಜಮ್ಮು ಪ್ರದೇಶದಲ್ಲಿ ಇತ್ತೀಚೆಗೆ ನಡೆದ ಸರಣಿ ಭಯೋತ್ಪಾದಕ ದಾಳಿಗಳ ನಂತರ ಭಾರತೀಯ ಸೇನೆಯು ಒಳನುಸುಳುವಿಕೆ ಪ್ರಯತ್ನವನ್ನು ವಿಫಲಗೊಳಿಸಿದೆ. ಕುಪ್ವಾರಾದ ಕೌಟ್ನಲ್ಲಿ ಸೇನೆ ಹಾಗೂ ಪೊಲೀಸರ ಜಂಟಿ ಕಾರ್ಯಾಚರಣೆ ಮುಂದುವರೆದಿದ್ದು, ಭದ್ರತಾ ಪಡೆಗಳು ತಮ್ಮ ಕಾರ್ಯಾಚರಣೆಯನ್ನು ಮುಂದುವರಿಸಿವೆ

`