Share this news

ಕಾರ್ಕಳ:ಹೊಸ ವರ್ಷಚಾರಣೆಯ ವೇಳೆ ಸಂಭವಿಸಬಹುದಾದ ರಸ್ತೆ ಅಪಘಾತಗಳಿಂದ ಪ್ರಾಣಹಾನಿ ತಡೆಯುವ ನಿಟ್ಟಿನಲ್ಲಿ ಡಿ.31ರಂದು ರಾತ್ರಿಯಿಡೀ 108 ತುರ್ತು ಆರೋಗ್ಯ ಕವಚ ಅಂಬುಲೆನ್ಸ್ ಕರ್ನಾಟಕ ರಾಜ್ಯಾದ್ಯಂತ ಸನ್ನದ್ಧವಾಗಲಿದೆ. ಸಾಮಾನ್ಯ ದಿನಗಳಿಗಿಂತ ಹೊಸ ವರ್ಷದ ಆಚರಣೆ ಸಂದರ್ಭಗಳಲ್ಲಿ ರಸ್ತೆ ಅಪಘಾತ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಕ್ರಮಕೈಗೊಳ್ಳಲಾಗಿದೆ.

108 ಅಂಬುಲೆನ್ಸ್ ಸೇವೆಯು ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯೊಂದಿಗೆ ನಿಕಟ ಸಹಕಾರವನ್ನು ಹೊಂದಿರುತ್ತದೆ.
ಹೆಚ್ಚಿನ ತುರ್ತು ಸಂದರ್ಭಗಳು ಸಂಭವಿಸಬಹುದಾದ ಪ್ರದೇಶಗಳಲ್ಲಿ ಹೆಚ್ಚುವರಿ ಅಂಬುಲೆನ್ಸ್ ಅನ್ನು ನಿಯೋಜಿಸಲಾಗುವುದು. ಹೆಚ್ಚುವರಿ ಸೇವೆಗಾಗಿ ಆಂಬುಲೆನ್ಸ್ ಸಿಬ್ಬಂದಿಯ ವಾರದ ರಜೆಯನ್ನು ಕೂಡ ರದ್ದುಗೊಳಿಸಲಾಗಿದೆ, ಮುಂಜಾಗೃತವಾಗಿ ಎಲ್ಲಾ ಆಂಬುಲೆನ್ಸ್ ನಲ್ಲಿ ಇಂಧನ , ಆಮ್ಲಜನಕ, ವೈದ್ಯಕೀಯ ಉಪಕರಣಗಳನ್ನು ಸಜ್ಜುಗೊಳಿಸಲಾಗಿದೆ.
ಈಗಾಗಲೇ ಉಡುಪಿ‌ಜಿಲ್ಲೆಯಲ್ಲಿ 18 ಅಂಬುಲೆನ್ಸ್ ಗಳನ್ನು ತಜ್ಞ ಸಿಬ್ಬಂದಿಗಳೊಂದಿಗೆ ನಿಯೋಜಿಸಲಾಗಿದೆ. ತುರ್ತುಪರಿಸ್ಥಿತಿಗಳಲ್ಲಿ 108 ಫ್ರೀ ಸಂಖ್ಯೆ ಡಯಲ್ ಮಾಡಬಹುದು ಎಂದು EMRI ಜಿಲ್ಲಾ ವ್ಯವಸ್ಥಾಪಕ ಮಹಾಬಲ ಅವರು ತಿಳಿಸಿದ್ದಾರೆ.
ತುರ್ತು ಸಂದರ್ಭಗಳಲ್ಲಿ
ಹೆಚ್ಚಿನ ಮಾಹಿತಿಗಾಗಿ
Mob no: 7022099108/9113264518
ಸಂಪರ್ಕಿಸಬಹುದಾಗಿದೆ.

 

 

 

Leave a Reply

Your email address will not be published. Required fields are marked *