ಹೆಬ್ರಿ: ಹೆಬ್ರಿ ತಾಲೂಕಿನ ಚಾರ ಗ್ರಾಮದ ಕಾರಾಡಿ ಎಂಬಲ್ಲಿ ಸೋಮವಾರ ರಾತ್ರಿ ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ದೇವಲಕುAದ ಗ್ರಾಮದ ಸಂತೋಷ್ ಎಂಬವರ ತಂದೆ ರವೀಂದ್ರ(75ವ) ಆತ್ಮಹತ್ಯೆ ಮಾಡಿಕೊಂಡವರು.
ರವೀಂದ್ರ ಅವರು ಹೊಟ್ಟೆನೋವಿನ ಸಮಸ್ಯೆಯಿಂದ ಬಳಲುತ್ತಿದ್ದು ಚಿಕಿತ್ಸೆ ಪಡೆದಿದ್ದರೂ ಗುಣಮುಖರಾಗಿರಲಿಲ್ಲ.
ಇದೇ ವಿಚಾರದಲ್ಲಿ ಮನನೊಂದು ಸೋಮವಾರ ರಾತ್ರಿ ಹೆಬ್ರಿಯ ಚಾರಾ ಗ್ರಾಮದ ಕಾರಾಡಿ ಎಂಬಲ್ಲಿರುವ ತಮ್ಮ ಸಂಬAಧಿಕರ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
`