
ಹೆಬ್ರಿ,ಫೆ. 03: ಹೆಬ್ರಿ ತಾಲೂಕಿನ ಕೆರೆಬೆಟ್ಟು ಎಂಬಲ್ಲಿ ಆರ್ಥಿಕ ಸಮಸ್ಯೆಯಿಂದ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.ಕೆರೆಬೆಟ್ಟು ಅಸ್ರಂಬಳ್ಳಿ ನಿವಾಸಿ ಜಗದೀಶ್ ಆಚಾರ್ಯ (54) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ.
ಮರದ ಶಿಲ್ಪಿ ಕೆಲಸ ಮಾಡಿಕೊಂಡಿದ್ದ ಜಗದೀಶ್ ಅವರು ಮದ್ಯಸೇವನೆ ಮಾಡುತ್ತಿದ್ದು, ಆರ್ಥಿಕ ಸಮಸ್ಯೆಯನ್ನೂ ಹೊಂದಿದ್ದರು. ಇದೇ ಕಾರಣಕ್ಕೆ ಮನನೊಂದು ಫೆ.1 ರಂದು ರಾತ್ರಿ ಮನೆಯ ಹತ್ತಿರದ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಕುರಿತು ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
.
.
.
.
