Share this news

ಕಾರ್ಕಳ:ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕಾರಿಗೆ ಅತೀ ವೇಗವಾಗಿ ಬಂದ ಬೈಕ್ ಸವಾರ ನಿಯಂತ್ರಣ ತಪ್ಪಿ ಡಿಕ್ಕಿಯಾದ ಪರಿಣಾಮ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಕಾರ್ಕಳದ ಹಿರ್ಗಾನದ ಗೊರಟ್ಟಿ ಚರ್ಚ್ ಬಳಿ‌ ಸಂಭವಿಸಿದೆ. ಈ ಅಪಘಾತದಿಂದ
ಬೈಕ್ ಸವಾರ ಮಹಾಂತೇಶ್ ಗಾಯಗೊಂಡಿದ್ದಾರೆ.


ಮಂಗಳೂರು ಬದಗುಲಿಪಾಡಿ ನಿವಾಸಿ ಸಾಹಿಲ್ ಎಂಬವರು ಗ್ಯಾರೇಜ್ ಮಾಲೀಕ ಇರ್ಫಾನ್ ಎಂಬವರ ಜತೆ ತನ್ನ ಕಾರನ್ನು ರಸ್ತೆಯ ‌ಬದಿಯಲ್ಲಿ ನಿಲ್ಲಿಸಿ ಮಾತನಾಡುವ ವೇಳೆ ಬೈಕ್ ಸವಾರ ಮಹಾಂತೇಶ್ ಅಜೆಕಾರು ಕಡೆಯಿಂದ ಕಾರ್ಕಳ ಕಡೆಗೆ ಅತಿವೇಗವಾಗಿ ಬಂದು ರಸ್ತೆಯ ಬಲ ಬದಿಯಲ್ಲಿ ನಿಲ್ಲಿಸಿದ್ದ ಕಾರಿಗೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.
ಅಪಘಾತದಿಂದ ಮಹಾಂತೇಶ್ ಅವರ ತಲೆಗೆ ಗಂಭೀರವಾಗಿ ಗಾಯಗಳಾಗಿವೆ.ತಕ್ಷಣವೇ ಅವರನ್ನು ಕಾರ್ಕಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಕುರಿತು ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

 

                        

                          

 

 

 

 

 

                        

                          

 

Leave a Reply

Your email address will not be published. Required fields are marked *