Share this news

ಕಾರ್ಕಳ: ಗಂಡ ಹೆಂಡತಿಯರ ನಡುವೆ ಕ್ಷುಲ್ಲಕ ಕಾರಣದಿಂದ ನಡೆದ ಜಗಳವು ಗಂಡನ ಸಾವಿನಲ್ಲಿ ಅಂತ್ಯ ಕಂಡ ದಾರುಣ ಘಟನೆ ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದ ಚಿಕ್ಕಲ್’ಬೆಟ್ಟು ಎಂಬಲ್ಲಿ ಮಂಗಳವಾರ ಮಧ್ಯಾಹ್ನ ಸಂಭವಿಸಿದೆ.
ಚಿಕ್ಕಲ್’ಬೆಟ್ಟು ನಿವಾಸಿ ಗೋಪಾಲಕೃಷ್ಣ ದೇವಾಡಿಗ(61) ಎಂಬವರು ತನ್ನ ಪತ್ನಿ ಸುರೇಖಾ ಅವರಿಗೆ ಕತ್ತಿಯಿಂದ ಕಡಿದು ಬಳಿಕ ತಾನು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೃತಪಟ್ಟ ಗೋಪಾಲಕೃಷ್ಣ ದೇವಾಡಿಗ ಅವರು ಕಳೆದ ಎರಡು ತಿಂಗಳ ಹಿಂದಷ್ಟೇ ತನ್ನ ಪತ್ನಿ ಸುರೇಖಾ ಅವರ ತವರು ಮನೆಯಲ್ಲಿ ವಾಸವಿದ್ದರು. ಗೋಪಾಲಕೃಷ್ಣ ದೇವಾಡಿಗ ಸಾಕಷ್ಟು ಕಡೆಗಳಲ್ಲಿ ಕೆಲಸ ಮಾಡಿಕೊಂಡಿದ್ದರು.ಸೋಮವಾರ ಮಧ್ಯಾಹ್ನ ಸಣ್ಣ ವಿಚಾರಕ್ಕೆ ಗಂಡ ಹೆಂಡತಿ ನಡುವೆ ಜಗಳ ನಡೆದಿದ್ದು ಇದರಿಂದ ಸಿಟ್ಟಿಗೆದ್ದ ಗೋಪಾಲಕೃಷ್ಣ ದೇವಾಡಿಗ ಏಕಾಎಕಿ ಕತ್ತಿಯಿಂದ ಪತ್ನಿ ಸುರೇಖಾ ಅವರ ತಲೆ, ಕೈಗೆ ಕತ್ತಿಯಿಂದ ಹಲ್ಲೆ ನಡೆಸಿದ ಪರಿಣಾಮ ತೀವ್ರ ಗಾಯಗೊಂಡು ನರಳಾಡುತ್ತಿದ್ದಾಗ ಗಂಡ ಗೋಪಾಲಕೃಷ್ಣ ಭಯಗೊಂಡು ತನ್ನ ತೋಟದಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಈ ಕುರಿತು ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

 

 

Leave a Reply

Your email address will not be published. Required fields are marked *