Share this news

 

 

 

ಲಕ್ನೋ: ಪಹಲ್ಗಾಮ್‌ನಲ್ಲಿ ಹಿಂದೂ ಪ್ರವಾಸಿಗರ ಮೇಲೆ ಭೀಕರ ದಾಳಿ ನಡೆದ ಬೆನ್ನಲ್ಲೇ ಉತ್ತರ ಪ್ರದೇಶದ ಬರೇಲಿಯಲ್ಲಿ ಇಸ್ಲಾಮಿಕ್ ಮೂಲಭೂತವಾದಿ ಐಎಂಸಿ ನಾಯಕ ಮೊಯಿನ್ ಸಿದ್ದಿಕಿ ಹಿಂದೂಗಳ ಶಿರಚ್ಛೇದ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ನಮ್ಮ ಸರ್ಕಾರ ಬಂದರೆ, ಹಿಂದೂ ಮನೆಗಳಲ್ಲಿ ಒಬ್ಬನೂ ಉಳಿಯುವುದಿಲ್ಲ ಎಂದು ಮೊಯಿನ್ ಸಿದ್ದಿಕಿ ಅಲಿಯಾಸ್ ಚೋಟಿ ಕಟ್ವಾ ಹೇಳಿದ್ದಾನೆ.
ಮೊಯಿನ್ ಸಿದ್ದಿಕಿಯ ಬೆದರಿಕೆಯ ನಂತರ, ಆ ಪ್ರದೇಶದ ಹಿಂದೂಗಳು ಭಯಭೀತರಾಗಿದ್ದಾರೆ. ಹಿಂದೂ ಮಹಿಳೆಯೊಬ್ಬರ ಮಗನ ಶಿರಚ್ಛೇದ ಮಾಡುವುದಾಗಿ ಐಎಂಸಿ ನಾಯಕ ಮೊಯಿನ್ ಸಿದ್ದಿಕಿ ಬೆದರಿಕೆ ಹಾಕಿದ್ದಾನೆ ಎಂದು ವರದಿಯಾಗಿದೆ. ಸರ್ಕಾರ ಬದಲಾದ ನಂತರ, ಹಿಂದೂಗಳ ಮನೆಗಳಿಗೆ ನುಗ್ಗಿ ಅವರನ್ನು ಕೊಲ್ಲುತ್ತೇನೆ ಎಂದು ಮೊಯಿನ್ ಹೇಳಿದ್ದಾನೆ. ಹಿಂದೂ ಮಹಿಳೆಯ ದೂರಿನ ಮೇರೆಗೆ ಪೊಲೀಸರು ಆರೋಪಿಯ ವಿರುದ್ಧ ದೂರು ದಾಖಲಿಸಿದ್ದಾರೆ.

ಲೋಧಿ ಟೋಲಾದ ನಿವಾಸಿ ಮಾಯಾದೇವಿ ಮಾತನಾಡಿ, ತಮ್ಮ ಮನೆಯ ಬಳಿ ಒಂದು ಪುರಾತನ ಬಾವಿ ಇದೆ. ಈ ಕಾಲೋನಿಯ ಎಲ್ಲಾ ಹಿಂದೂಗಳು ಈ ಬಾವಿಯಲ್ಲಿ ಪೂಜೆ ಸಲ್ಲಿಸುತ್ತಿದ್ದು ಇದನ್ನು ಐಎಂಸಿ ನಾಯಕ ಮೊಯಿನ್ ಸಿದ್ದಿಕಿ ಮತ್ತು ಆತನ ಬೆಂಬಲಿಗರು ಇದನ್ನು ವಿರೋಧಿಸುತ್ತಿದ್ದಾರೆ. ಇದೇ ವಿಚಾರವಾಗಿ ಮಾಯಾದೇವಿಯ ಮಗ ಜಿತು ಈ ವಿಷಯದ ಬಗ್ಗೆ ನಗರಸಭೆಗೆ ಹಲವು ಬಾರಿ ದೂರು ನೀಡಿದ್ದರು.ಇದೇ ಕಾರಣದಿಂದ ಸಿಟ್ಟಿಗೆದ್ದ ಮೊಯಿನ್ ಮಹಿಳೆಗೆ ಬೆದರಿಕೆ ಹಾಕಿ, ಒಂದು ದಿನ ನಾನು ನಿನ್ನ ಮಗನ ತಲೆಯನ್ನು ಕತ್ತರಿಸಿ ನೇತು ಹಾಕುತ್ತೇನೆ ಎಂದು ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಲಾಗಿದೆ.

 

 

 

 

 

 

 

 

 

Leave a Reply

Your email address will not be published. Required fields are marked *