Share this news

ಕಾರ್ಕಳ : ನಾರಾವಿ ಸರಕಾರಿ ಪ್ರೌಢಶಾಲೆಯಲ್ಲಿ ಮೀರಾ ಕಾಮತ್ ಕಾರ್ಕಳ ಕಂಪ್ಯೂಟರ್ ಲ್ಯಾಬ್ ಮತ್ತು ಸ್ಮಾರ್ಟ್ ಕ್ಲಾಸ್ ಉದ್ಘಾಟನೆ ಹಾಗೂ 2023-24 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 100% ಫಲಿತಾಂಶ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುಣಾತ್ಮಕ ಅಂಕದ ಸರಾಸರಿಯಲ್ಲಿ ಈ ಶಾಲೆ ಪ್ರಥಮ ಸ್ಥಾನ ಪಡೆದುಕೊಂಡ ಕೀರ್ತಿಗೆ ಪಾತ್ರರಾದ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಸೆ. 4ರಂದು ಜರಗಿತು.

ಕಾರ್ಯಕ್ರಮದಲ್ಲಿ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಸುಶೀಲಾ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕಂಪ್ಯೂಟರ್ ಹಾಗೂ ಸ್ಮಾರ್ಟ್ ಕ್ಲಾಸ್ ವ್ಯವಸ್ಥೆ ಮಾಡಿಸಿ ಕೊಟ್ಟ ಕೆ ಕಮಲಾಕ್ಷ ಕಾಮತ್ ಕಾರ್ಕಳ, ಪ್ರತೀಕ್ ಕಾಮತ್ ಯುಎಸ್‌ಎ, ಕಾರ್ಕಳ ಕುಕ್ಕುಂದೂರು ಶ್ರೀ ದುರ್ಗಾಪರಮೇಶ್ವರಿ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷರಾದ ಸಂತೋಷ್ ರಾವ್, ನಾರಾವಿ ಪಂಚಾಯತ್ ಸದಸ್ಯರಾದ ಉದಯ್ ಹೆಗ್ಡೆ, ಜನಸೇವಾ ಟ್ರಸ್ಟ್ ನ ಕಾರ್ಯದರ್ಶಿಗಳಾದ ಉಮೇಶ್ , ಸುರೇಶ್ ಪೂಜಾರಿ ಎಸ್ ಡಿ ಎಂ ಸಿ ಉಪಾದ್ಯಕ್ಷರಾದ ಸುರೇಶ್ ಪೂಜಾರಿ ವೇದಿಕೆಯಲ್ಲಿದ್ದರು.

2023-24 ನೆ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದ ಮೂರು ವಿದ್ಯಾರ್ಥಿಗಳನ್ನು ಜನಸೇವಾ ಟ್ರಸ್ಟ್ ಹಾಗೂ ಕಮಲಾಕ್ಷ ಕಾಮತ್ ಪರವಾಗಿ ಸನ್ಮಾನಿಸಿ ಗೌರವಧನ ನೀಡಲಾಯಿತು. 100% ಫಲಿತಾಂಶಕ್ಕೆ ಕಾರಣೀಕರ್ತರಾದ ಎಲ್ಲಾ ವಿದ್ಯಾರ್ಥಿಗಳನ್ನು ಶಾಲಾ ವತಿಯಿಂದ ಸ್ಮರಣಿಕೆ ನೀಡಿ ಗೌರವಿಸಲಾಯಿತು.
ಕಠಿಣ ಪರಿಶ್ರಮದಿಂದ ವಿದ್ಯಾದಾನ ಮಾಡಿದ ಶಿಕ್ಷಕರನ್ನೂ ಗೌರವದಿಂದ ಸನ್ಮಾನಿಸಲಾಯಿತು.
ಕಮಲಾಕ್ಷ ಕಾಮತ್ ಇವರನ್ನೂ ಶಾಲೆಗೆ ನೀಡಿದ ಕೊಡುಗೆಯ ಸಹಕಾರಕ್ಕೆ ಶಾಲಾ ವತಿಯಿಂದ ಹಾಗೂ ಜನಸೇವಾ ಟ್ರಸ್ಟ್ ವತಿಯಿಂದ ಸನ್ಮಾನಿಸಲಾಯಿತು.ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳು ಹಾಗೂ ಪೋಷಕರು ಭಾಗವಹಿಸಿದ್ದರು.

ದೈಹಿಕ ಶಿಕ್ಷಕ ಕೋದಂಡರಾಮ ಸ್ವಾಗತಿಸಿ, ಹಿಂದಿ ಶಿಕ್ಷಕಿ ಶಾಂಭವಿ ಕುಮಾರಿ ಧನ್ಯವಾದವಿತ್ತರು. ವಿದ್ಯಾರ್ಥಿಗಳ ಸನ್ಮಾನ ಕಾರ್ಯಕ್ರಮವನ್ನು ಶ್ರೀಮತಿ ಆಶಾಲತಾ ಗಣಿತ ಶಿಕ್ಷಕಿ ಹಾಗೂ ಶ್ರೀಮತಿ ಗೀತಾ ಕನ್ನಡಭಾಷಾ ಶಿಕ್ಷಕಿ ನೆರವೇರಿಸಿಕೊಟ್ಟರು.
ಕಮಲಾಕ್ಷ ಕಾಮತ್ ರವರ ಸನ್ಮಾನ ಕಾರ್ಯಕ್ರಮವನ್ನು ಆನಂದ್ ಭಟ್ ಸಮಾಜ ವಿಜ್ಞಾನ ಶಿಕ್ಷಕರು ನೆರವೇರಿಸಿದರು.ಸ್ಮಾರ್ಟ್ ಕ್ಲಾಸ್ ಬಗ್ಗೆ ಮಾಹಿತಿಯನ್ನು ವಿಜ್ಞಾನ ಶಿಕ್ಷಕ ಶರೀಫ್ ಕೆ ಸಯ್ಯದ್ ಇವರು ತಿಳಿಸಿದರು. ಇಂಗ್ಲಿಷ್ ಭಾಷಾ ಶಿಕ್ಷಕಿ ಶ್ರೀಮತಿ ಆಶಲತಾ ಕಾರ್ಯಕ್ರಮವನ್ನು ನಿರೂಪಿಸಿದರು.

 

                        

                          

                        

                       

Leave a Reply

Your email address will not be published. Required fields are marked *