Share this news

ನವದೆಹಲಿ: ಆಪರೇಷನ್ ಸಿಂಧೂರಗೆ ಪ್ರತೀಕಾರವಾಗಿ ಪಾಕಿಸ್ತಾನ ವೈಮಾನಿಕ ದಾಳಿಯನ್ನು ನಡೆಸಿದ್ದು, ಭಾರತೀಯ ವಾಯುಪಡೆ ಅದನ್ನು ವಿಫಲಗೊಳಿಸಿದೆ. ಬುಧವಾರ(ಮೇ 07) ತಡರಾತ್ರಿ ಉತ್ತರ ಮತ್ತು ಪಶ್ಚಿಮ ಭಾರತದ ಹಲವು ಸ್ಥಳಗಳನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನ ಡ್ರೋನ್ ಮತ್ತು ಕ್ಷಿಪಣಿ ದಾಳಿ ನಡೆಸಿದೆ. ಚಂಡೀಗಢ, ಆವಂತಿಪೊರ, ಜಲಂಧರ್, ಲೂಧಿಯಾನ, ಅಮೃತಸರ, ಪಠಾಣಕೋಟ್, ಕಪೂರ್ತಲಾ, ನಲ, ಫಲೋಡಿ, ಉತ್ತರಲೈ, ಭುಜ್, ಜಮ್ಮು, ಶ್ರೀನಗರ, ಆಧಂಪುರ, ಭಟಿಂಡಾ ಮೇಲೆ ಪಾಕ್ ಕ್ಷೀಪಣಿ ದಾಳಿಗೆ ಯತ್ನಿಸಿದೆ. ಆದರೆ ಇದನ್ನು ಭಾರತದ ಎಸ್-400 ಏರ್ ಡಿಫೆನ್ಸ್ ಸಿಸ್ಟಂ ಹೊಡೆದುರುಳಿಸಿದೆ.

ನಿನ್ನೆ (ಮೇ 07) ರಾತ್ರಿ ಭಾರತದ 15 ನಗರಗಳ ಮೇಲೆ ಪಾಕಿಸ್ತಾನ ಮಿಸೈಲ್ ದಾಳಿ ನಡೆಸಿದ್ದು, ಅದನ್ನ S-400 ಏರ್ ಡಿಫೆನ್ಸ್ ಸಿಸ್ಟಮ್ ಸಂಪೂರ್ಣವಾಗಿ ವಿಫಲಗೊಳಿಸಿದೆ. ಭಾರತದ ರಕ್ಷಣಾ ಬತ್ತಳಿಕೆಯಲ್ಲಿರುವ ಪ್ರಮುಖ ಅಸ್ತ್ರ S-400 ಏರ್ ಡಿಫೆನ್ಸ್ ಸಿಸ್ಟಮ್ ಭಾರತವನ್ನ ರಕ್ಷಿಸಿದೆ. ಈ S-400 ಏರ್ ಡಿಫೆನ್ಸ್ ಸಿಸ್ಟಮ್ ಭಾರತಕ್ಕೆ ವೈರಿ ರಾಷ್ಟ್ರಗಳ ವಾಯು ದಾಳಿ, ಮಿಸೈಲ್ ದಾಳಿಯಿಂದ ಸಂಪೂರ್ಣ ರಕ್ಷಣೆ ನೀಡುತ್ತದೆ. S-400 ಅನ್ನು ಸುದರ್ಶನ ಚಕ್ರ ಎಂದೂ ಕರೆಯಲಾಗುತ್ತೆ.

2019ರ ಪುಲ್ವಾಮಾ ದಾಳಿಯ ಬಳಿಕ ಭಾರತ ರಷ್ಯಾದಿಂದ ಈ S-400 ಏರ್ ಡಿಫೆನ್ಸ್ ಸಿಸ್ಟಮ್ ಅನ್ನು ಖರೀದಿ ಮಾಡಿದೆ. ಆಗ ರಷ್ಯಾದಿಂದ ಎಸ್-400 ಖರೀದಿಸಿದರೆ ಭಾರತದ ಮೇಲೆ ಕೆಲ ನಿರ್ಬಂಧ ವಿಧಿಸುವುದಾಗಿ ಅಮೆರಿಕಾ ಬೆದರಿಕೆ ಹಾಕಿತ್ತು. ಆದರೆ ಅಮೆರಿಕಾದ ಬೆದರಿಕೆಗೂ ಜಗ್ಗದ ಭಾರತ, ತನ್ನ ರಕ್ಷಣೆಗಾಗಿ ಏರ್ ಡಿಫೆನ್ಸ್ ಸಿಸ್ಟಮ್ ಬೇಕೆಂದು ಖರೀದಿಸಿತ್ತು.

 

 

 

 

 

 

 

Leave a Reply

Your email address will not be published. Required fields are marked *