Share this news

ಕಾರ್ಕಳ:ಇನ್ನಾ ಗ್ರಾಮಸ್ಥರ ತೀವ್ರ ವಿರೋಧದ ನಡುವೆಯೂ ನಂದಿಕೂರಿನ ಅದಾನಿ ಪವರ್ ಪ್ರಾಜೆಕ್ಟ್ ಕೇರಳಕ್ಕೆ ವಿದ್ಯುತ್ ನೀಡಲು ಲೈನ್ ಅಳವಡಿಕೆಗೆ ಟವರ್ ನಿರ್ಮಾಣ ಕಾಮಗಾರಿಯನ್ನು ವಿರೋಧಿಸಿ ಕಾಂಗ್ರೆಸ್ ಪಕ್ಷದ ವತಿಯಿಂದ ಇನ್ನಾದಲ್ಲಿ ಗುರುವಾರ ಸಂಜೆಯಿಂದ ಆಹೋರಾತ್ರಿ ಧರಣಿ ನಡೆಯಿತು.

ಈ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರಾದ ಉದಯ ಶೆಟ್ಟಿ ಮುನಿಯಾಲು ಅವರು ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿ, ಗ್ರಾಮಸ್ಥರ ವಿರೋಧದ ನಡುವೆ ಕಾಮಗಾರಿ ಆರಂಭಿಸುವುದು ಖಂಡನೀಯ,ಯಾವ ಕಾರಣಕ್ಕೂ ಕಾಮಗಾರಿ ಆರಂಭಿಸಲು ಅವಕಾಶ ನೀಡುವುದಿಲ್ಲ ಎಂದು ತಮ್ಮ ಪ್ರತಿರೋಧವನ್ನು ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಅಮರನಾಥ ಶೆಟ್ಟಿ ಇನ್ನಾ, ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ತಕ್ಷರಾದ ದೀಪಕ್ ಕೋಟ್ಯಾನ್ ಇನ್ನಾ, ಚಂದ್ರಹಾಸ ಶೆಟ್ಟಿ, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಕುಶ.ಆರ್. ಮೂಲ್ಯ, ಜಯ.ಎಸ್.ಕೋಟ್ಯಾನ್, ರಾಜಾ ಭಟ್, ಗಣಪತಿ ಹೆಗ್ಡೆ, ದೀಪಕ್ ಕಾಮತ್, ಆರ್.ಕೆ. ದಿವಾಕರ ಶೆಟ್ಟಿ, ಎಮ್.ಪಿ. ಮೊಯಿದಿನಬ್ಬ, ಹರೀಶ್ ಶೆಟ್ಟಿ, ಕೃಷ್ಣ ಕುಮಾರ್ ಶೆಟ್ಟಿ, ಯೋಗೀಶ್ ಇನ್ನಾ, ಅನಿತಾ ಡಿಸೋಜ, ಪ್ರದೀಪ್ ಬೇಲಾಡಿ, ಚಂದ್ರಹಾಸ ಶೆಟ್ಟಿಗಾರ್, ರಂಜಿತ್ ಸಿ.ಟಿ, ಸೂರಜ್ ಶೆಟ್ಟಿ, ಸುಹಾಸ್ ಕಾವ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಪ್ರತಿಭಟನಾಕಾರರು ಧರಣಿಯ ಸ್ಥಳದಲ್ಲಿ ಅಡುಗೆ ತಯಾರಿಸಿ ಊಟ ತಯಾರಿಸಿ ಭೋಜನ ಸವಿದರು

 

Leave a Reply

Your email address will not be published. Required fields are marked *