ಕಾರ್ಕಳ: ದ.ಕ ಜಿಲ್ಲೆ ವ್ಯಾಪ್ತಿಯ ಎಲ್ಲೂರು ಗ್ರಾಮದಿಂದ ನಂದಿಕೂರು ಇನ್ನಾ ಮೂಡಬಿದಿರೆ ಮಾರ್ಗವಾಗಿ ಸಾರ್ವಜನಿಕರ ತೀವ್ರ ವಿರೋಧದ ನಡುವೆಯೂ ಬಲಾತ್ಕಾರವಾಗಿ ಕೇರಳಕ್ಕೆ 400 ಕೆ.ವಿ ಹೈಟೆನ್ಷನ್ ವಿದ್ಯುತ್ ಲೈನ್ ಅಳವಡಿಸುವ ರಾಜ್ಯ ಸರ್ಕಾರದ ನಿರ್ಧಾರದ ವಿರುದ್ಧ ಕಾರ್ಕಳ ಬಿಜೆಪಿ ಕ್ಷೇತ್ರಾಧ್ಯಕ್ಷ ನವೀನ್ ನಾಯಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಾರ್ವಜನಿಕರ ವಿರೋಧದವಿದ್ದರೂ ಸರಕಾರ, ಜಿಲ್ಲಾಡಳಿತ ಬಲತ್ಕಾರವಾಗಿ ಜನವಸತಿ ಪ್ರದೇಶದಲ್ಲಿ ಟವರ್ ಗಳನ್ನು ನಿರ್ಮಿಸಲು ಮುಂದಾಗಿದೆ. ಈ ಹಿಂದೆ ನಮ್ಮ ಬಿಜೆಪಿ ಸರಕಾರ ಅಧಿಕಾರದ ಅವಧಿಯಲ್ಲಿ ಸಾರ್ವಜನಿಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮಾತುಕತೆ ನಡೆಸಿ ಇತ್ಯರ್ಥ ಪಡಿಸಲು ನಿರ್ಧರಿಸಿತ್ತು. ಆದರೀಗ ಕಾಂಗ್ರೆಸ್ ಸರಕಾರ ಸ್ಥಳಿಯರ ವಿಶ್ವಾಸಕ್ಕೆ ತೆಗೆದುಕೊಳ್ಳದೇ ಬಲತ್ಕಾರವಾಗಿ ಕಾಮಗಾರಿ ನಡೆಸಲು ಮುಂದಾಗಿದೆ. ಅಭಿವೃದ್ದಿ ಜನತೆಯ ಜೊತೆಗೆ ಕೊಂಡೊಯ್ಯಬೇಕೆ ಹೊರತು ನಾಗರಿಕರ ವಿರೋಧದವಿದ್ದಾಗ ಬಲವಂತದಿಂದ ನಡೆಸುವುದಲ್ಲ. ಸರಕಾರವು ಜಿಲ್ಲಾಡಳಿತ, ಪೊಲೀಸ್ ಇಲಾಖೆಗೆ ಒತ್ತಡ ಹಾಕಿ ಜನರ ವಿರೋಧ ಕಟ್ಟಿಕೊಂಡು ಕಾಮಗಾರಿ ನಡೆಸಲು ಮುಂದಾದಲ್ಲಿ ಮುಂದಾಗುವ ಅನಾಹುತಗಳಿಗೆ ಸರಕಾರವೇ ನೇರ ಹೊಣೆಯಾಗಬೇಕಾಗುತ್ತದೆ ಎಂದು ನವೀನ್ ನಾಯಕ್ ಸರಕಾರವನ್ನು ಎಚ್ಚರಿಸಿದ್ದಾರೆ.