ಜಮ್ಮು ಮತ್ತು ಕಾಶ್ಮೀರ : ಪಹಲ್ಗಾಮ್ನಲ್ಲಿ ಉಗ್ರರು ನಡೆಸಿದ ದಾಳಿ ಬಳಿಕ ಭಯೋತ್ಪಾದಕರಿಗಾಗಿ ತೀವ್ರ ಹುಡುಕಾಟ ನಡೆಯುತ್ತಿದೆ. ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಜಂಟಿ ಶೋಧ ಕಾರ್ಯಾಚರಣೆಯಲ್ಲಿ ಪೂಂಚ್ನ ಸುರಂಕೋಟೆ ಅರಣ್ಯ ಪ್ರದೇಶದಲ್ಲಿ ಜಮ್ಮು ಮತ್ತು ಕಾಶ್ಮೀರದ ಪೂಂಚ್ ನಲ್ಲಿ ಉಗ್ರರ ಅಡಗುತಾಣ ಪತ್ತೆಯಾಗಿದ್ದು, ಐದು ಐಇಡಿ(ಸುಧಾರಿತ ಸ್ಫೋಟಕ ಸಾಧನ)ಗಳನ್ನು ಭದ್ರತಾ ಪಡೆಗಳು ವಶಕ್ಕೆ ಪಡೆದಿವೆ.
ಭದ್ರತಾ ಪಡೆಗಳು ಸ್ಥಳದಿಂದ ಸಂವಹನ ಸಾಧನಗಳು ಮತ್ತು ಇತರ ಅಪರಾಧ ಸಾಮಗ್ರಿಗಳನ್ನು ವಶಪಡಿಸಿಕೊಂಡಿದ್ದಾರೆ. ಶಂಕಿತ ಅಡಗುತಾಣಗಳ ಮೇಲೆ ದಾಳಿ ಮಾಡಿದ್ದಾರೆ, ಭಯೋತ್ಪಾದಕರು ಬಳಸುತ್ತಿದ್ದ ಆಶ್ರಯಗಳನ್ನು ಧ್ವಂಸ ಮಾಡಿದ್ದಾರೆ ಮತ್ತು ನೂರಾರು ಭಯೋತ್ಪಾದಕ ಸಹಚರರನ್ನು ವಿಚಾರಣೆಗಾಗಿ ಬಂಧಿಸಿದ್ದಾರೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ಏಪ್ರಿಲ್ 22 ರಂದು, ಅನಂತ್ನಾಗ್ ಜಿಲ್ಲೆಯ ಪಹಲ್ಗಾಮ್ ಬಳಿಯ ಜನಪ್ರಿಯ ಪ್ರವಾಸಿ ತಾಣವಾದ ಬೈಸರನ್ನಲ್ಲಿ ಭಯೋತ್ಪಾದಕರು ಗುಂಡು ಹಾರಿಸಿ 26 ಜನರನ್ನು ಹತ್ಯೆ ಮಾಡಿದ್ದರು.