Share this news

ಕಾರ್ಕಳ: ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಧೀಶ (ಸಂಚಾರಿ ಪೀಠ ಕಾರ್ಕಳ) ದಿನೇಶ್ ಹೆಗ್ಡೆ ಬೆಂಗಳೂರಿಗೆ ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಅವರನ್ನು ಕಾರ್ಕಳ ವಕೀಲರ ಸಂಘದ ವತಿಯಿಂದ ಜೂ.18 ರಂದು ನ್ಯಾಯಾಲಯದ ಆವರಣದಲ್ಲಿ ಸನ್ಮಾನಿಸಲಾಯಿತು.

ಬೀಳ್ಕೊಡುಗೆ ಸಮಾರಂಭದಲ್ಲಿ ಹಿರಿಯ ವಕೀಲರಾದ ಎಮ್. ಕೆ. ವಿಜಯ್ ಕುಮಾರ್, ಸರಕಾರಿ ಅಭಿಯೋಜಕರಾದ ಪ್ರಕಾಶ್ಚಂದ್ರ ಶೆಟ್ಟಿ, ಕಾರ್ಕಳ ವಕೀಲರ ಸಂಘದ ಅಧ್ಯಕ್ಷರಾದ ಸುನಿಲ್ ಕುಮಾರ್ ಶೆಟ್ಟಿ ನ್ಯಾಯಾಧೀಶರ ಕುರಿತು ಮಾತನಾಡಿದರು.
ಇದೇವೇಳೆ ಸನ್ಮಾನ ಸ್ವೀಕರಿಸಿ ನ್ಯಾಯಾಧೀಶರಾದ ದಿನೇಶ್ ಹೆಗ್ಡೆಯವರು ಮಾತನಾಡಿ, ಸಿಬ್ಬಂದಿಗಳು ಹಾಗೂ ವಕೀಲರ ಕಾರ್ಯದಕ್ಷತೆಯನ್ನು ಪ್ರಶಂಸಿದರು.

ಈ ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶೆ ಶರ್ಮಿಳಾ ಸಿ.ಎಸ್, ಪ್ರಧಾನ ಸಿವಿಲ್ ನ್ಯಾಯಾಧೀಶೆ ಕೋಮಲ ಆರ್. ಸಿ, ವಕೀಲರ ಸಂಘದ ಅಧ್ಯಕ್ಷರಾದ ಸುನಿಲ್ ಕುಮಾರ್ ಶೆಟ್ಟಿ, ಉಪಾಧ್ಯಕ್ಷರಾದ ಕೆ. ಹರೀಶ್ ಅಧಿಕಾರಿ, ಸಹಾಯಕ ಸರಕಾರಿ ಅಭಿಯೋಜಕರಾದ ಸೀತಾ ಹಾಗೂ ಕಾರ್ಕಳ ವಕೀಲರ ಸಂಘದ ಸದಸ್ಯರು ಉಪಸ್ಥಿತರಿದ್ದರು.
ಪ್ರಧಾನ ಕಾರ್ಯದರ್ಶಿ ಅನಿಲ್ ಕುಮಾರ್ ನಿಟ್ಟೆ ಸ್ವಾಗತಿಸಿದರು ಮತ್ತು ಕೋಶಾಧಿಕಾರಿ ಅರುಣ್ ಕುಮಾರ್ ಶೆಟ್ಟಿ ವಂದಿಸಿದರು
ವಕೀಲರಾದ ಲೋಲಾಕ್ಷ ಕಾರ್ಯಕ್ರಮವನ್ನು ನಿರೂಪಿಸಿದರು.

 

 

                        

                          

 

 

 

 

 

                        

                          

 

 

Leave a Reply

Your email address will not be published. Required fields are marked *