Share this news

ಕೊಲ್ಲೂರು: ರಿಷಬ್ ಶೆಟ್ಟಿ ನಿರ್ದೇಶದ ಕಾಂತಾರಾ – 1 ಚಿತ್ರದ ಶೂಟಿಂಗ್ ವೇಳೆ ಜೂನಿಯರ್ ಆರ್ಟಿಸ್ಟ್ ಒಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಮೃತ ದುರ್ದೈವಿಯನ್ನು ಕಪಿಲ್ ಎಂದು ಗುರುತಿಸಲಾಗಿದೆ. ಇವರು ಕೇರಳ ಮೂಲದವರಾಗಿದ್ದು ಅವರನ್ನು ಈ ಚಿತ್ರದಲ್ಲಿ ಜೂನಿಯರ್ ಕಲಾವಿದರಾಗಿ ಅವರು ಅಭಿನಯಿಸುತ್ತಿದ್ದರು.

ಮೇ 6ರಂದು, ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಪುಣ್ಯಕ್ಷೇತ್ರದ ಬಳಿಯ ಸೌಪರ್ಣಿಕಾ ನದಿಯಲ್ಲಿ ಶೂಟಿಂಗ್ ನಡೆಸಲಾಗುತ್ತಿತ್ತು. ಶೂಟಿಂಗ್ ಮುಗಿದ ಮೇಲೆ ಸಂಜೆ ನದಿಯಲ್ಲಿ ಈಜಾಡಲು ಹೋಗಿದ್ದಾಗ ಕಪಿಲ್ ಅವರು ಆಕಸ್ಮಿಕವಾಗಿ ನದಿಯಲ್ಲಿ ಮುಳುಗಿ ಸಾವಿಗೀಡಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಚಿತ್ರತಂಡದಲ್ಲಿ ಕೆಲಸ ಮಾಡುತ್ತಿದ್ದ ಜೂನಿಯರ್ ಆರ್ಟಿಸ್ಟ್ ದಾರುಣ ಸಾವಾಗಿದೆ. ಶೂಟಿಂಗ್ ಮುಗಿಸಿ ಸೌಪರ್ಣಿಕ ನದಿಗೆ ಈಜಲು ಹೋಗಿದ್ದಾಗ ಕಪಿಲ್ ಹಾಗೂ ಅವರ ತಂಡದವರು ನೀರಿನ ಆಳ ತಿಳಿಯದೆ ಮುಳುಗಿ ಸಾವಿಗೀಡಾಗಿದ್ದಾರೆ.

 

 

 

 

 

 

 

 

 

Leave a Reply

Your email address will not be published. Required fields are marked *