Share this news

ಕಾರ್ಕಳ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರಿಗೆ ಕ್ರೇನ್ ಡಿಕ್ಕಿಯಾಗಿ ಪಾದಾಚಾರಿ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟ ಘಟನೆ ದಾರುಣ ಘಟನೆ ಕಾರ್ಕಳ ತಾಲೂಕಿನ ಕುಕ್ಕುಂದೂರು ಗ್ರಾಮದ ದುರ್ಗಾ ಗ್ಯಾರೆಜ್ ಬಳಿ ಮಂಗಳವಾರ ಬೆಳಗ್ಗೆ ಸಂಭವಿಸಿದೆ.
ಕುಕ್ಕುAದೂರು ಜಲದುರ್ಗನಗರದ ನಿವಾಸಿ ಅಂಗಾರ(70) ಎಂಬವರು ಮೃತಪಟ್ಟ ದುರ್ದೈವಿ. ಅಂಗಾರ ಮಂಗಳವಾರ ಬೆಳಗ್ಗೆ ಜೋಡುಕಟ್ಟೆ ಕಡೆಯಿಂದ ಅಯ್ಯಪ್ಪನಗರ ಕಡೆಗೆ ರಸ್ತೆಯ ಅಂಚಿನಲ್ಲಿ ನಡೆದುಕೊಂಡು ಹೋಗುತ್ತಿರುವಾಗ ಈ ದುರ್ಘಟನೆ ನಡೆದಿದ್ದು, ಕ್ರೇನ್ ಚಾಲಕ ಶ್ರೀಕಾಣತ್ ತಾನು ಚಲಾಯಿಸುತ್ತಿದ್ದ ಕ್ರೇನನ್ನು ಯದ್ವಾತದ್ವಾ ಚಲಾಯಿಸಿದ ಪರಿಣಾಮ ಅಂಗಾರ ಏಕಾಎಕಿ ಕ್ರೇನ್ ಅಡಿಗೆ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕ್ರೇನ್ ಕುಕ್ಕುಂದೂರು ಅಯ್ಯಪ್ಪನಗರದ ಕಲ್ಲುಕೋರೆಯ ಸದಾನಂದ ಎಂಬವರಿಗೆ ಸೇರಿದ್ದು ಎನ್ನಲಾಗಿದ್ದು ಚಾಲಕನ ನಿರ್ಲಕ್ಷö್ಯತನದ ಚಾಲನೆ ಈ ದುರ್ಘಟನೆಗೆ ಕಾರಣ ಎನ್ನಲಾಗಿದೆ.
ಈ ಕುರಿತು ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

                        

                          

                        

                          

 

Leave a Reply

Your email address will not be published. Required fields are marked *