Share this news

ಕಾರ್ಕಳ: ತಾಲೂಕಿನ ನಿಟ್ಟೆ ಗ್ರಾಮದ ದೂಪದಕಟ್ಟೆ ಎಂಬಲ್ಲಿ ಜೂ.15 ರಂದು ರಸ್ತೆ ಬದಿಯಲ್ಲಿ ನಿಂತಿದ್ದಾಗ ಕಾರು ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಿಸದೆ ಜೂ.15 ಭಾನುವಾರ ಮೃತಪಟ್ಟಿದ್ದಾರೆ. ಕಸಬಾ ದ ಸವಿತಾ @ ವೀಣಾ (59) ಮೃತಪಟ್ಟ ಮಹಿಳೆ.

ಸವಿತಾ ಅವರು ಜೂ.15 ರಂದು ನಿಟ್ಟೆ ದೂಪದಕಟ್ಟೆಯಲ್ಲಿರುವ ಗುಲಾಬಿ ಎಂಬ ಹೆಸರಿನ ಹೋಟೆಲ್ ಮುಂಭಾಗದಲ್ಲಿ  ಕಾರ್ಕಳ-ಪಡುಬಿದ್ರಿ ರಾಜ್ಯ ಹೆದ್ದಾರಿಯಲ್ಲಿ ರಸ್ತೆ ದಾಟಲೆಂದು ರಸ್ತೆ ಬದಿಯಲ್ಲಿ ನಿಂತಿದ್ದ ವೇಳೆ  ನಿಟ್ಟೆ ಕಡೆಯಿಂದ ಬಂದ ಕಾರು ಡಿಕ್ಕಿಯಾಗಿತ್ತು. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅವರಿಗೆ ಕಾರ್ಕಳದ ಪ್ರತಿಮಾ ನರ್ಸಿಂಗ್ ಹೋಂ, ಬಳಿಕ ಕಾರ್ಕಳ ಟಿ.ಎಂ.ಎ. ಪೈ. ರೋಟರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಕೆ.ಎಂ.ಸಿ. ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಅವರು ಭಾನುವಾರ ಮೃತಪಟ್ಟಿದ್ದಾರೆ.

ಈ ಕುರಿತು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

 

 

 

 

 

 

Leave a Reply

Your email address will not be published. Required fields are marked *