ಕಾರ್ಕಳ: ಕಾರ್ಕಳದ ಶಿವತಿಕೆರೆ ಬಳಿ ಬೈಕಿಗೆ ಕಾರು ಡಿಕ್ಕಿಯಾಗಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕಸಬಾ ದ ಸನತ್ ಕುಮಾರ್ ಎಂಬವರು ಸೋಮವಾರ ಕುಂಟಲ್ಪಾಡಿ ಜಂಕ್ಷನ್ ಕಡೆಯಿಂದ ಬೈಪಾಸ್ ಮಾರ್ಗವಾಗಿ ಶಿವತಿಕೆರೆ ಕಡೆಗೆ ಹೊರಟು ಶಿವತಿಕೆರೆ ತಲುಪಿ ಯೂ ಟರ್ನ್ ಮಾಡುತ್ತಿರುವಾಗ ಕಾರ್ಕಳ ಕಡೆಯಿಂದ ಪುಲ್ಕೆರಿಕಡೆಗೆ ವೇಗವಾಗಿ ಬರುತ್ತಿದ್ದ ಕಾರು ಬೈಕಿಗೆ ಹಿಂದಿನಿಂದ ಡಿಕ್ಕಿಯಾಗಿದೆ.
ಅಪಘಾತದ ಪರಿಣಾಮ ಸನತ್ ವರು ಬೈಕ್ ಸಮೇತ ರಸ್ತೆಗೆ ಬಿದ್ದು ಗಾಯಗೊಂಡಿದ್ದಾರೆ. ಅವರಿಗೆ ಕಾರ್ಕಳ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಬಳಿಕ ಮಣಿಪಾಲ ಕೆಎಮ್ ಸಿ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆ ನೀಡಿ ಇನ್ನೂ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಒಮೇಗಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಕುರಿತುಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.