ಕಾರ್ಕಳ: ಕಾರ್ಕಳ ಬೈಲೂರಿನ ಪರಶುರಾಮ್ ಥೀಮ್ ಪಾರ್ಕ್ನ ಪರಶುರಾಮ ಮೂರ್ತಿ ವಿವಾದ ಪ್ರಕರಣಕ್ಕೆ ಸಂಬAಧಿಸಿದAತೆ ಶಿಲ್ಪಿ ಕೃಷ್ಣ ನಾಯಕ್ ಅವರು ಸಲ್ಲಿಸಿದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಉಡುಪಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ವಜಾಗೊಳಿಸಿದೆ.
ಶಿಲ್ಪಿ ಕೃಷ್ಣ ನಾಯಕ್ ಅವರು ‘ಕೃಷ್ ಆರ್ಟ್ ವರ್ಲ್ಡ್’ ಎಂಬ ಸಂಸ್ಥೆಯ ಮೂಲಕ ಥೀಮ್ ಪಾರ್ಕ್ನಲ್ಲಿ ಕಂಚಿನ ಪರಶುರಾಮ್ ಮೂರ್ತಿಯನ್ನು ಸ್ಥಾಪಿಸಲು ಉಡುಪಿ ನಿರ್ಮಿತಿ ಕೇಂದ್ರದಿAದ 1.25 ಕೋಟಿ ರೂ. ಹಣ ಪಡೆದುಕೊಂಡು ಕಾಮಗಾರಿ ನಡೆಸಿದ್ದರು. ನಂತರದ ದಿನಗಳಲ್ಲಿ ಪರಶುರಾಮನ ಕಂಚಿನ ಮೂರ್ತಿಯನ್ನು ಮಾಡದೇ ನಕಲಿ ಪರಶುರಾಮ ಮೂರ್ತಿಯನ್ನು ನಿರ್ಮಿಸಿ ಸರಕಾರಕ್ಕೆ ವಂಚನೆ ಮಾಡಿರುವುದಾಗಿ ನಲ್ಲೂರಿನ ಕೃಷ್ಣ ಶೆಟ್ಟಿ ಕಳೆದ ಜೂನ್ ನಲ್ಲಿ ಕಾರ್ಕಳ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದು ಪ್ರಕರಣ ದಾಖಲಾಗಿತ್ತು. ಈ ಪ್ರಕರಣವನ್ನು ರದ್ಧುಗೊಳಿಸುವಂತೆ ಕೃಷ್ಣ ನಾಯಕ್ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದು ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಅ.21ರಂದು ಅರ್ಜಿಯನ್ನು ವಜಾಗೊಳಿಸಿಸಿತ್ತು.
ಈ ಹಿನ್ನೆಲೆಯಲ್ಲಿ ಕೃಷ್ಣ ನಾಯಕ್ ನಿರೀಕ್ಷಣಾ ಜಾಮೀನು ಕೋರಿ ಉಡುಪಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಾಧೀಶ ಸಮಿವುಲ್ಲಾ, ಅರ್ಜಿಯನ್ನು ವಜಾಗೊಳಿಸಿ ಆದೆಶಿಸಿದ್ದಾರೆ.