ಕಾರ್ಕಳ: ಮಂಗಳೂರು ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಪ್ರಥಮ ವರ್ಷದ ಎಂಬಿಎ ಓದುತ್ತಿರುವ ವಿದ್ಯಾರ್ಥಿಯೋರ್ವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜನವರಿ 19ರಂದು ಕಾರ್ಕಳದ ಕಸಬಾ ಗ್ರಾಮದ ಮೀನಗುಂಡಿ ಕಾಂಪೌಂಡ್ ನಲ್ಲಿ ಸಂಭವಿಸಿದೆ.
ಮೃತ ವಿದ್ಯಾರ್ಥಿಯನ್ನು ಕಾರ್ಕಳದ ಕಸಬಾ ಗ್ರಾಮದ ಮೀನಗುಂಡಿ ಕಾಂಪೌಂಡ್ ನಲ್ಲಿ ವಾಸವಾಗಿದ್ದ ಕೆ. ವೆಂಕಟೇಶ ಹೆಗ್ಡೆ (22) ಎಂದು ಗುರುತಿಸಲಾಗಿದೆ. ಮಂಗಳೂರು ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಪ್ರಥಮ ವರ್ಷದ ಎಂಬಿಎ ಓದುತ್ತಿರುವ ವೆಂಕಟೇಶ್ ತಂದೆಯ ಬಳಿ ವಿದ್ಯಾಭ್ಯಾಸ ಮಾಡಲು ತನಗೆ ಕಷ್ಟವಾಗುತ್ತಿದೆ ಎಂದು ಹೇಳಿಕೊಂಡಿದ್ದು ಸುಮಾರು 10 ದಿನಗಳಿಂದ ಮೌನವಾಗಿದ್ದ.
ಇದೇ ಕಾರಣದಿಂದ ಮನನೊಂದು ಜನವರಿ 19ರ ರಾತ್ರಿ ಮನೆಯ ಹಿಂಬದಿಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.