ಕಾರ್ಕಳ: ಕಾರ್ಕಳ ತಾಲೂಕಿನಲ್ಲಿ ಗುರುವಾರ ಭಾರೀ ಗಾಳಿ ಮಳೆ ಸುರಿದಿದ್ದು ಮಧ್ಯಾಹ್ನ 2.30 ರ ವೇಳೆಗೆ ಸರಕಾರಿ ಪಾಲಿಟೆಕ್ನಿಕ್ ಕಾಲೇಜಿನ ಟ್ರಾನ್ಸ್ಫಾರ್ಮರ್ಗೆ ಸಿಡಿಲು ಬಡಿದು ಹಾನಿಯಾಗಿದ್ದು, ಇನ್ವರ್ಟರ್ ಗೂ ಹಾನಿಯಾಗಿ ಸುಮಾರು 2 ಲಕ್ಷ ರೂ. ನಷ್ಟವಾಗಿದೆ.
ಸಾಣೂರು ಮರತಂಗಡಿ ಸರ್ಕಾರಿ ಪ್ರೌಢಶಾಲೆಯ ಮೇಲ್ಚಾವಣಿಯ ರೀಪರ್ ಗಳು ಜಾರಿ ಹಂಚುಗಳು ಬಿದ್ದಿದ್ದು ಮುಂಜಾಗೃತಾ ಕ್ರಮವಾಗಿ ಕೊಠಡಿಯಲ್ಲಿದ್ದ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಲಾಗಿದೆ. ಅಲ್ಲದೇ ತಾಲೂಕಿನ ಇನ್ನೂ ಹಲವೆಡೆ ಭಾರೀ ಗಾಳಿ ಮಳೆ ಸುರಿದಿದ್ದು, ಮನೆಗಳ ಮೇಲೆ ಮರ ಬಿದ್ದು ಹಾನಿಯಾದರೆ , ಅಡಿಕೆ ತೋಟಗಳು ಧರಾಶಾಹಿಯಾಗಿವೆ.
ಕಂದಾಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.