ಕಾರ್ಕಳ: ಇಲ್ಲಿನ ಕೆ.ಎಂ.ಇ.ಎಸ್ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲರದ ಕೆ.ಬಾಲಕೃಷ್ಣ ರಾವ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, “ಯೋಗವು ಮಾನಸಿಕ ನೆಮ್ಮದಿ ಮತ್ತು ದೈಹಿಕ ಶಕ್ತಿಯನ್ನು ಕೊಡುತ್ತದೆ. ಪ್ರತಿ ದಿನವೂ ಯೋಗ ಮಾಡಿದರೆ ವೈದ್ಯರಿಂದ ದೂರವಿರಬಹುದು. ಯೋಗವು ಸರ್ವರಿಗೂ ಆರೋಗ್ಯವನ್ನೂ, ದೀರ್ಘಾಯುಷ್ಯವನ್ನು ಕೊಡುತ್ತದೆ. ಇದು ಕೇವಲ ಧಾರ್ಮಿಕ ಆಚರಣೆಯಲ್ಲ, ಇದು ಒಂದು ರೀತಿಯ ಕ್ರಮಭರಿತವಾದ ವ್ಯಾಯಾಮ. ಇದನ್ನು ಜಾತಿ ಮತ ಧರ್ಮಗಳಿಲ್ಲದೆ ಎಲ್ಲರೂ ಮಾಡಬಹುದು. ಪ್ರತಿನಿತ್ಯ ಯೋಗ ಮಾಡುವುದರಿಂದ ವಿದ್ಯಾರ್ಥಿಗಳ ಮಾನಸಿಕ ಶಕ್ತಿ, ದೈಹಿಕ ಶಕ್ತಿ ಹೆಚ್ಚಾಗಿ ಓದುವುದರ ಕಡೆಗೆ ಹೆಚ್ಚಿನ ಗಮನ ಕೊಡಲು ಸಾಧ್ಯವಾಗುತ್ತದೆ” ಎಂದರು.
ಯೋಗ ನಮಸ್ಕಾರದಿಂದ ಕಾರ್ಯಕ್ರಮ ಆರಂಭಗೊAಡಿತು. ಪ್ರಾಂಶುಪಾಲರಾದ ಕೆ. ಬಾಲಕೃಷ್ಣ ರಾವ್ ಯೋಗ ತರಬೇತಿ ನೀಡಿದರು.
ಪ್ರಾಥಮಿಕ ವಿಭಾಗದ ದೈಹಿಕ ಶಿಕ್ಷಣ ಶಿಕ್ಷಕಿ ದಿವ್ಯಾ ಶೆಟ್ಟಿ ಪ್ರಾಥಮಿಕ ವಿದ್ಯಾರ್ಥಿಗಳಿಗೆ ಯೋಗ ತರಬೇತಿಯನ್ನು ನೀಡಿದರು.
ಪ್ರೌಢಶಾಲಾ ವಿಭಾಗದ ದೈಹಿಕ ಶಿಕ್ಷಣ ಶಿಕ್ಷಕಿ ಶ್ರೀಮತಿ ಸುಚೇತಾ ಹೆಗ್ಡೆ , ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಸತೀಶ್ಚಂದ್ರ ಹೆಗ್ಡೆ ಸಹಕರಿಸಿದರು.
ಪ್ರಾಥಮಿಕ, ಪ್ರೌಢ ಮತ್ತು ಕಾಲೇಜಿನ ಎಲ್ಲಾ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಂಡರು.
ದೀಕ್ಷಿತಾ, ಸಂಗೀತ, ಗುರುಕುಮಾರ್ ಸಹಕರಿಸಿದರು. ಪ್ರೌಢಶಾಲಾ ಮುಖ್ಯಶಿಕ್ಷಕಿ ಶ್ರೀಮತಿ ಪಾಟ್ಕರ್ ಮತ್ತು ಪ್ರಾಥಮಿಕ ವಿಭಾಗದ ಮುಖ್ಯಶಿಕ್ಷಕಿ ಲೊಲಿಟಾ ಡಿಸಿಲ್ವಾರವರು ಕಾರ್ಯಕ್ರಮದ ಜವಬ್ದಾರಿಯನ್ನು ನಿಭಾಯಿಸಿದರು. ಯೋಗ ನಮಸ್ಕಾರದೊಂದಿಗೆ ಕಾರ್ಯಕ್ರಮ ಕೊನೆಗೊಂಡಿತು.