ಕಾರ್ಕಳ: ಕಾರ್ಕಳ ಹಿರಿಯಂಗಡಿ ಶ್ರೀ ದುರ್ಗಾಪರಮೇಶ್ವರಿ ಸಭಾಭವನದಲ್ಲಿ ಜುಲೈ.13 ರಂದು ಜರುಗಲಿರುವ ಛತ್ರಪತಿ ಶ್ರೀ ಶಿವಾಜಿ ಮಹಾರಾಜರ 398ನೇ ಜಯಂತೋತ್ಸವ ಹಾಗೂ ಕರ್ನಾಟಕ ಕ್ಷತ್ರಿಯ ಮರಾಠ ಪರಿಷತ್ತಿನ ಸುವರ್ಣ ಮಹೋತ್ಸವ, ವಿದ್ಯಾರ್ಥಿ ವೇತನ ಮತ್ತು ಸಹಾಯಧನ ವಿತರಣಾ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಲಾಯಿತು.
ಈ ಸಂದರ್ಭದಲ್ಲಿ ಕೆ. ಕೆ. ಎಮ್. ಪಿ ಜಿಲ್ಲಾ ಶಾಖೆ ಉಡುಪಿಯ ಅಧ್ಯಕ್ಷ ಪ್ರಕಾಶ್ ರಾವ್ ಕವಡೆ, ಕಾರ್ಯದರ್ಶಿ ಸಂತೋಷ್ ರಾವ್ ಕವಡೆ, ಜಿಲ್ಲಾ ಮಹಿಳಾ ಪ್ರತಿನಿಧಿ ಡಾ. ಸುಮತಿ ರಾವ್ ಪವಾರ್, ತಾಲೂಕು ಅಧ್ಯಕ್ಷ ಕೀರ್ತನ್ ಕುಮಾರ್ ಲಾಡ್, ಕೋಶಾಧಿಕಾರಿ ಸತೀಶ್ ರಾವ್ ಪವಾರ್, ಗಿರೀಶ್ ರಾವ್ ಮೋರೆ, ಹರಿಶ್ಚಂದ್ರ ರಾವ್ ಮೋರೆ, ದಿನೇಶ್ ರಾವ್ ಕವಡೆ,ಕೃಷ್ಣಪ್ಪರಾವ್ ಶಿಂಧೆ,ರಾಜಾಜಿ ರಾವ್ ಕವಡೆ ಹಾಗೂ ಸಮಾಜದ ಬಂಧುಗಳು ಉಪಸ್ಥಿತರಿದ್ದರು.