ಕಾರ್ಕಳ: ಜಮ್ಮು ಕಾಶ್ಮೀರದ ಪಹಲ್ಗಾಂವ್ ನಲ್ಲಿ ಭಾರತೀಯ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕರ ದಾಳಿಯ ಬಳಿಕ ಈ ಕೃತ್ಯಕ್ಕೆ ಕುಮ್ಮಕ್ಕು ನೀಡಿದ ಪಾಕಿಸ್ತಾನದ ವಿರುದ್ಧ ಭಾರತ ಯುದ್ಧಕ್ಕೆ ಸನ್ನದ್ಧವಾಗಿದೆ. ಇದಕ್ಕೆ ಪೂರ್ವಭಾವಿಯಾಗಿ ದೇಶದಲ್ಲಿನ ಪಾಕಿಸ್ತಾನಿ ಪ್ರಜೆಗಳನ್ನು ದೇಶ ತೊರೆಯುವಂತೆ ಕಟ್ಟಪ್ಪಣೆ ಮಾಡಿದೆ.ಆದರೂ ಕೆಲವೆಡೆ ಬಾಂಗ್ಲಾದೇಶ ಹಾಗೂ ಪಾಕಿಸ್ತಾನದ ಪ್ರಜೆಗಳು ಅಕ್ರಮವಾಗಿ ವಾಸವಿದ್ದು ಅಂತಹವರು ದೇಶದ ಭದ್ರತೆಗೆ ಮಾರಕವಾಗಿದ್ದು,ಇವರ ಪತ್ತೆಗೆ ಕಾರ್ಕಳ ಶಾಸಕ ಸುನಿಲ್ ಕುಮಾರ್ ತನ್ನ ಕಚೇರಿಯಲ್ಲೇ ಸಹಾಯವಾಣಿ ತೆರೆದಿದ್ದು, ಅಕ್ರಮ ಬಾಂಗ್ಲಾ ಮತ್ತು ಪಾಕಿಸ್ತಾನಿಗಳು ವಾಸವಿರುವ ಮಾಹಿತಿ ನೀಡಿ ದೇಶದ ಭದ್ರತೆಗೆ ನಾವೆಲ್ಲರೂ ಕೈಜೋಡಿಸುವಂತೆ ಸುನಿಲ್ ಕುಮಾರ್ ಮನವಿ ಮಾಡಿದ್ದಾರೆ.
ಕರೆ ಮಾಡಬೇಕಾದ ಮೊಬೈಲ್ ಸಂಖ್ಯೆ: 6366454238/
7348906249 ಕರೆ ಮಾಡಿ ಮಾಹಿತಿ ನೀಡಬಹುದು.