ಕಾರ್ಕಳ: ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಸಂಘ ಸಂಘದ ವತಿಯಿಂದ ವಿವಿಧ ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯಾದ್ಯಂತ ನಡೆಸುತ್ತಿರುವ ಅನಿರ್ದಿಷ್ಟ ಅವಧಿ ಮುಷ್ಕರಕ್ಕೆ ಕಾರ್ಕಳ ಶಾಸಕರು, ಮಾಜಿ ಸಚಿವರಾದ ವಿ ಸುನಿಲ್ ಕುಮಾರ್ ಭೇಟಿ ನೀಡಿದರು.
ವೇತನ ಹೆಚ್ಚಳ, ಮೂಲಭೂತ ಸೌಕರ್ಯಗಳು ಸೇರಿದಂತೆ ಹತ್ತು ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಳೆದ ಫೆ. 10 ರಿಂದ ಗ್ರಾಮ ಆಡಳಿತಾಧಿಕಾರಿಗಳು ಅನಿರ್ಧಿಷ್ಟಾವಧಿ ಮುಷ್ಕರ ನಡೆಸುತ್ತಿದ್ದಾರೆ. ಇವರ ರಾಜ್ಯವ್ಯಾಪಿ ಮುಷ್ಕರ ಇದೀಗ ಶನಿವಾರ 6ನೇ ದಿನಕ್ಕೆ ಕಾಲಿಟ್ಟಿದ್ದು, ಈವರೆಗೂ ಸರ್ಕಾರ ಮಾತ್ರ ಇವರ ಬೇಡಿಕೆಗಳಿಗೆ ಸ್ಪಂದಿಸುವ ಲಕ್ಷಣಗಳು ಗೋಚರಿಸುತ್ತಿಲ್ಲ. ಗ್ರಾಮ ಆಡಳಿತಾಧಿಕಾರಿಗಳ ಮುಷ್ಕರದಿಂದ ಜನಸಾಮಾನ್ಯರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಕಾರ್ಕಳ ಹಾಗೂ ಹೆಬ್ರಿ ತಾಲೂಕಿನ ಎಲ್ಲಾ ಗ್ರಾಮ ಆಡಳಿತ ಅಧಿಕಾರಿಗಳು ಈ ಮುಷ್ಕರದಲ್ಲಿ ಭಾಗವಹಿಸಿದ್ದು, ರಾಜ್ಯಾದ್ಯಂತ ಆಯಾ ತಾಲೂಕು ಕಛೇರಿಗಳಲ್ಲಿ ಅನಿರ್ದಿಷ್ಟಾವಧಿ ಮುಷ್ಕರವು ನಡೆಯುತ್ತಿದೆ ಆದರೂ ಯಾವುದೇ ಜಿಲ್ಲೆಯ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಉನ್ನತ ಮಟ್ಟದ ಅಧಿಕಾರಿಗಳು ಸೌಜನ್ಯಕ್ಕೂ ಭೇಟಿ ನೀಡಿ ಅಧಿಕಾರಿಗಳ ಬೇಡಿಕೆಗಳನ್ನು ಆಲಿಸಿಲ್ಲ. ಸಂಬAಧಪಟ್ಟ ಇಲಾಖಾ ಸಚಿವರು ಹಾಗೂ ಸರ್ಕಾರ ಗ್ರಾಮ ಆಡಳಿತ ಅಧಿಕಾರಿಗಳ ಪ್ರತಿಭಟನೆಯನ್ನು ಗಂಭೀರವಾಗಿ ಪರಿಗಣಿಸದೆ ಕಿವಿ ಕೇಳದಂತೆ-ಕಣ್ಣಿಗೆ ಕಾಣದಂತೆ ವರ್ತಿಸುತ್ತಿದ್ದು, ಇದೊಂದು ಸಂವೇದನಾಶೀಲ ರಹಿತ ಸರ್ಕಾರವಾಗಿರುತ್ತದೆ ಎಂದು ರಾಜ್ಯ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.
ಮುಷ್ಕರ ಇದೇ ರೀತಿ ಮುಂದುವರೆದರೆ ಸಾರ್ವಜನಿಕರಿಗೆ ದೊರೆಯುವ ಸೇವೆಯಲ್ಲಿ, ಅವಶ್ಯಕವಾಗಿ ಬೇಕಾಗಿರುವ ಜಾತಿ ಆದಾಯ ಪ್ರಮಾಣ ಪತ್ರಗಳ ಸೇವೆಯಲ್ಲಿ ವ್ಯತ್ಯಯ ಕಂಡುಬAದು ಸಾರ್ವಜನಿಕರು ತೊಂದರೆಗೊಳಪಡುತ್ತಾರೆ. ಇದಕ್ಕೆ ಸರ್ಕಾರವೇ ನೇರ ಹೊಣೆ. ಬಹುತೇಕ ಗ್ರಾಮ ಆಡಳಿತ ಅಧಿಕಾರಿಗಳ ಕಚೇರಿಗಳು ಶಿಥಿಲಾವಸ್ಥೆಯಿಲ್ಲಿದ್ದು, ಹೊಸ ಅಥವಾ ನವೀಕೃತ ಕಟ್ಟಡ, ಗುಣಮಟ್ಟದ ಪೀಠೋಪಕರಣಗಳು, ದಾಖಲೆಗಳ ಅಪ್ ಲೋಡ್ ಗಳಿಗೆ ಗುಣಮಟ್ಟದ ಸ್ಮಾರ್ಟ್ ಫೋನ್, ಲ್ಯಾಪ್ ಟಾಪ್, ಪ್ರಿಂಟರ್ ಹಾಗೂ ಸ್ಕ್ಯಾನರ್ ಪೂರೈಸುವಂತೆ ಮನವಿಯಲ್ಲಿ ಉಲ್ಲೇಖಿಸಿದ್ದಾರೆ. ಇದಲ್ಲದೇ ಕಂದಾಯ ಇಲಾಖೆಯ ಒಟ್ಟು 21 ಮೊಬೈಲ್ ತಂತ್ರಾAಶಗಳ ನಿರ್ವಹಣೆಗೆ ತಾಂತ್ರಿಕ ಹುದ್ದೆಗಳಿಗೆ ನೀಡುವ ವೇತನವನ್ನು ಗ್ರಾಮ ಆಡಳಿತಾಧಿಕಾರಿಗಳಿಗೆ ನಿಗದಿಪಡಿಸಬೇಕು. ನೌಕರರಿಗೆ ಅಂತರ್ ಜಿಲ್ಲಾ ವರ್ಗಾವಣೆ ಅಥವಾ ಇತರೇ ಇಲಾಖೆಗಳಂತೆ ವರ್ಗಾವಣೆಗೆ ವಿಶೇಷ ಮಾರ್ಗಸೂಚಿ ರಚಿಸಬೇಕು. ಗ್ರಾಮ
ಆಡಳಿತಾಧಿಕಾರಿಗಳು ಕರ್ತವ್ಯ ನಿರ್ವಹಿಸುವ ಸಂದರ್ಭದಲ್ಲಿ ಮೃತಪಟ್ಟರೆ ಅವರ ಕುಟುಂಬಕ್ಕೆ 50.00 ಲಕ್ಷ ರೂ ಪರಿಹಾರ ನೀಡುವಂತೆ ಮನವಿಯಲ್ಲಿ ಸರ್ಕಾರವನ್ನು ಒತ್ತಾಯಿಸಲಾಗಿದೆ. ಇದಲ್ಲದೇ ಚುನಾವಣೆ, ಅತಿವೃಷ್ಟಿ, ಅನಾವೃಷ್ಟಿ ಸಂದರ್ಭಗಳಲ್ಲಿ ಹಾಗೂ ಸಾರ್ವಜನಿಕ ಸೇವೆಗಳನ್ನು ನೀಡುವ ಸಂದರ್ಭದಲ್ಲಿ ದೈಹಿಕ ಹಲ್ಲೆ, ಕೊಲೆ ಪ್ರಕರಣಗಳು ನಡೆಯುತ್ತಿದ್ದು, ಆದ್ದರಿಂದ 3 ಸಾವಿರ ರೂ ಆಪತ್ತಿನ ಭತ್ಯೆ ನೀಡುವಂತೆ ಆಗ್ರಹಿಸಿದ್ದಾರೆ.
ಇನ್ನುಳಿದಂತೆ ಪೊಲೀಸ್ ಇಲಾಖೆಯಲ್ಲಿ ನೀಡುತ್ತಿರುವ ಒಂದು ತಿಂಗಳ ಹೆಚ್ಚುವರಿ ವೇತನ ಹಾಗೂ ಹಾಲಿ ಪ್ರಯಾಣ ಭತ್ಯೆ 500 ರೂಪಾಯಿಯನ್ನು 5 ಸಾವಿರಕ್ಕೆ ಏರಿಸುವಂತೆ, ವಂಶವೃಕ್ಷ, ಜಾತಿ ಪ್ರಮಾಣ ಪತ್ರಗಳ ವಿತರಣೆ ಸಂದರ್ಭದಲ್ಲಿ ತಪ್ಪು ಮಾಹಿತಿ ನೀಡಿದ ಅರ್ಜಿದಾರರ ಬದಲಿಗೆ ಗ್ರಾಮ ಆಡಳಿತಾಧಿಕಾರಿಗಳ ಮೇಲೆ ಎಫ್.ಐ.ಆರ್ ದಾಖಲಿಸುತ್ತಿದ್ದು ಇದರ ಬದಲಿಗೆ ಅರ್ಜಿದರರನ್ನೇ ಹೊಣೆಗಾರರಾಗಿಸಬೇಕು. ಬೆಳೆ ಸಮೀಕ್ಷೆ ಬೆಳೆ ಪರಿಹಾರದ ಕೆಲಸವನ್ನು ಕೃಷಿ ಅಥವಾ ತೋಟಗಾರಿಕೆಗೆ ವಹಿಸುವಂತೆ ನಿರ್ದೇಶಿಸಬೇಕು, ಮ್ಯುಟೇಶನ್ ಅವಧಿ ವಿಸ್ತರಣೆ, ಪ್ರೊಟೊಕಾಲ್ ಕೆಲಸದಿಂದ ವಿನಾಯಿತಿ ಹಾಗೂ ದವರ್ ಮತ್ತು ಜಮಾಬಂದಿಯನ್ನು ರದ್ದುಪಡಿಸಬೇಕು ಮಾತ್ರವಲ್ಲದೇ ಗ್ರಾಮ ಸಹಾಯಕರಿಗೆ ಸೇವಾ ಭದ್ರತೆ ಒದಗಿಸುವ ಬೇಡಿಕೆಯನ್ನು ಈಡೇರಿಸಬೇಕೆಂದು ಒಟ್ಟು 23 ಅಂಶಗಳನ್ನು ಮನವಿಯಲ್ಲಿ ಉಲ್ಲೇಖಿಸಿದ್ದಾರೆ.
ಪ್ರತಿಭಟನಾಕಾರರ ಮನವಿಯನ್ನು ಸ್ವೀಕರಿಸಿ, ಶೀಘ್ರ ಸರ್ಕಾರದ ಗಮನಕ್ಕೆ ತರುತ್ತೇನೆ, ಮಾತ್ರವಲ್ಲದೇ, ಮುಂದಿನ ಅಧಿವೇಶನದಲ್ಲಿ ಈ ಕುರಿತು ಸಮಗ್ರವಾಗಿ ಚರ್ಚಿಸಿ, ಸರ್ಕಾರದ ಗಮನ ಸೆಳೆಯುತ್ತೇನೆ ಎಂದು ಶಾಸಕರು ಗ್ರಾಮ ಆಡಳಿತ ಅಧಿಕಾರಿಗಳಿಗೆ ಭರವಸೆ ನೀಡಿದರು. ಅವರ ಎಲ್ಲಾ ಬೇಡಿಕೆಗಳನ್ನು ಸರ್ಕಾರ ಪರಿಶೀಲಿಸಿ, ಶೀಘ್ರವೇ ಪರಿಹಾರ ಕ್ರಮ ಕೈಗೊಂಡು ಪ್ರತಿಭಟನೆ ಹಿಂಪಡೆಯುವAತೆ ಪ್ರತಿಭಟನಾಕಾರರ ಮನವೊಲಿಸಿ, ಸಾರ್ವಜನಿಕರಿಗೆ ಸೂಕ್ತ ಸೇವೆ ಒದಗುವಂತೆ ನೋಡಿಕೊಳ್ಳಬೇಕು ಎಂದು ವಿ ಸುನಿಲ್ ಕುಮಾರ್ ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಆಗ್ರಹಿಸಿದ್ದಾರೆ.