ಕಾರ್ಕಳ: ಮುಂಗಾರುಪೂರ್ವ ಮಳೆಯ ಅಬ್ಬರ ಹೆಚ್ಚುತ್ತಿದ್ದು, ಸಿಡಿಲು ಬಿರುಗಾಳಿ ಸಹಿತ ಮಳೆಗೆ ಹಲವೆಡೆ ಮನೆ ಹಾಗೂ ಕೃಷಿ ತೋಟಗಳಿಗೆ ಭಾರೀ ಹಾನಿಯಾಗಿದೆ.
ಮಂಗಳವಾರ ಸಂಜೆ ಕಾರ್ಕಳ ತಾಲೂಕಿನಲ್ಲಿ ಸುರಿದ ಬಿರುಗಾಳಿ ಸಹಿತ ಮಳೆಗೆ ಕಾರ್ಕಳ ತಾಲೂಕಿನ ಮುಡಾರು ಗ್ರಾಮದ ಶಕುಂತಲಾ ಎಂಬವರ ಮನೆಗೆ ಮರ ಉರುಳಿಬಿದ್ದ ಪರಿಣಾಮ ಮನೆಯ ಗೋಡೆ ಹಾಗೂ ಸಿಮೆಂಟ್ ಶೀಟ್ ಧ್ವಂಸಗೊಂಡು ಸುಮಾರು 40 ಸಾವಿರ ನಷ್ಟ ಸಂಭವಿಸಿದೆ.
ಕಂದಾಯ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಪರಿಹಾರದ ಭರವಸೆ ನೀಡಿದ್ದಾರೆ.