Share this news

ಕಾರ್ಕಳ : ಕಾಡುಪ್ರಾಣಿಗಳನ್ನು ಬೇಟೆಯಾಡುತ್ತಿದ್ದ ವ್ಯಕ್ತಿಯನ್ನು ಕುದುರೆಮುಖ ರಾಷ್ಟ್ರೀಯ ಅಭಯಾರಣ್ಯ ವ್ಯಾಪ್ತಿಯಲ್ಲಿ ಅರಣ್ಯಾಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಕಾಟಿಪಳ್ಳ ನಿವಾಸಿ ಪಾಸ್ವಿಮ್ ಅಲಿ (35) ಬಂಧಿತ ಆರೋಪಿ.

ಕಾರ್ಕಳ ತಾಲೂಕಿನ ಮಾಳ ಗ್ರಾಮದ ಮುಳ್ಳೂರು ಅರಣ್ಯ ಚೆಕ್ ಪೋಸ್ಟ್ ಬಳಿ ಆರೋಪಿಯನ್ನು ಬಂಧಿಸಲಾಗಿದ್ದು, ಅರಣ್ಯಾಧಿಕಾರಿಗಳು ಮೇಲೆ ದಾಳಿ ನಡೆಸಿದಾಗ ಸುಮಾರು 5-6 ಮಂದಿ ರೈಫಲ್‌ನೊಂದಿಗೆ ಶಸ್ತ್ರಸಜ್ಜಿತರಾಗಿ ಕಾಡು ಪ್ರಾಣಿಗಳನ್ನು ಬೇಟೆಯಾಡಲು ಕಾರಿನಲ್ಲಿ ಕಾಯುತ್ತಿದ್ದರು. ಕಾಟಿಪಳ್ಳ ನಿವಾಸಿ ಪಾಸ್ವಿಮ್ ಅಲಿ ಎಂಬಾತನನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದು, ಇತರರು ಕಾರು ಮತ್ತು ಗನ್ ನೊಂದಿಗೆ ಪರಾರಿಯಾಗಿದ್ದಾರೆ.

ಶಂಕರನಾರಾಯಣ ಅರಣ್ಯ ಪ್ರದೇಶದಲ್ಲಿ ಎರಡು ಕಾಡೆಮ್ಮೆಗಳನ್ನು ಬೇಟೆಯಾಡಿದ ಆರೋಪ ಪಾಸ್ವಿಮ್ ಅಲಿ ಮೇಲಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಅವರ ವಿರುದ್ಧ ಕಾಡು ಪ್ರಾಣಿಗಳನ್ನು ಬೇಟೆಯಾಡಲು ಯತ್ನಿಸಿದ ಆರೋಪ ಮತ್ತು ಶಸ್ತ್ರಾಸ್ತ್ರ ಕಾಯ್ದೆ ಉಲ್ಲಂಘನೆ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Leave a Reply

Your email address will not be published. Required fields are marked *