ಕಾರ್ಕಳ: ಕಾರ್ಕಳ ತಾಲೂಕಿನ ಕಾಂತಾವರ ಗ್ರಾಮದ ಬಾರಾಡಿ -ಪರಪ್ಪಾಡು ರಸ್ತೆಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಮರಳನ್ನು ಪೊಲೀಸರು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ.
ಗ್ರಾಮಾಂತರ ಠಾಣಾ ಎ.ಎಸ್.ಐ ಪ್ರಕಾಶ್ ಕುಮಾರ್ ಅವರು ಭಾನುವಾರ ರೌಂಡ್ಸ್ ನಲ್ಲಿದ್ದ ವೇಳೆ ಬಾರಾಡಿ-ಪರಪ್ಪಾಡಿ ರಸ್ತೆಯಲ್ಲಿ ಚಿಲಿಂಬಿ ಕಡೆಯಿಂದ ಪರಪ್ಪಾಡಿ ಕಡೆಗೆ ಟಿಪ್ಪರ್ನಲ್ಲಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದು ಪೊಲೀಸರು ಲಾರಿಯನ್ನು ನಿಲ್ಲಿಸುವಂತೆ ಸೂಚಿಸಿದಾಗ ಟಿಪ್ಪರ್ ನಿಲ್ಲಿಸಿ ಚಾಲಕ ಪರಾರಿಯಾಗಿದ್ದಾನೆ. ಪೊಲೀಸರು ಟಿಪ್ಪರ್ ಸಹಿತ ಮರಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ.