

ಕಾರ್ಕಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ)ಕಾರ್ಕಳ ತಾಲೂಕು,ಶೌರ್ಯ ವಿಪತ್ತು ನಿರ್ವಹಣಾ ಸಮಿತಿ ಕಾರ್ಕಳ ತಾಲೂಕಿನ ಶೌರ್ಯ ಸ್ವಯಂ ಸೇವಕರ ತರಬೇತಿ ಕಾರ್ಯಗಾರ ಜೋಡುರಸ್ತೆ ರಾಜಪುರ ಸಭಾ ಭವನದಲ್ಲಿ ನಡೆಯಿತು.
ರಾಜಪುರ ಸಾರಸ್ವತ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾದ ಕಡಾರಿ ರವೀಂದ್ರ ಪ್ರಭು ಕಾರ್ಯಾಗಾರ ಉದ್ಘಾಟಿಸಿ, ಕಾರ್ಕಳ ತಾಲೂಕಿನ ಈ ಶೌರ್ಯ ಘಟಕವು ಮೂರು ವರ್ಷದಿಂದ ಉತ್ತಮ ರೀತಿಯಲ್ಲಿ ಸೇವೆಯನ್ನು ನೀಡುತ್ತಿದ್ದು ಮುಂದಿನ ದಿನದಲ್ಲಿ ರಾಜ್ಯಮಟ್ಟದಲ್ಲಿ ಗುರುತಿಸುವಂತಾಗಲಿ ಎಂದು ಕಳೆದ 5 ವರ್ಷಗಳಿಂದ ನಿಸ್ವಾರ್ಥವಾಗಿ ಸೇವೆ ಸಲ್ಲಿಸುತ್ತಿರುವ ಶೌರ್ಯ ಸ್ವಯಂ ಸೇವಕರಿಗೆ ಶುಭ ಹಾರೈಸಿದರು.
ಜನಜಾಗೃತಿ ವೇದಿಕೆ ಅಧ್ಯಕ್ಷರಾದ ಉದಯ್ ಕುಮಾರ್ ಹೆಗ್ಡೆ ಅಧ್ಯಕ್ಷತೆ ವಹಿಸಿ ಕಾರ್ಯಕ್ರಮದ ಉದ್ದೇಶವನ್ನು ತಿಳಿಸಿ ಉತ್ತಮ ರೀತಿಯಲ್ಲಿ ತರಬೇತಿ ಪಡೆದು ವಿಪತ್ತು ಬಂದಾಗ ಕಾರ್ಯರೂಪಕ್ಕೆ ತರುವಂತೆ ತಿಳಿಸಿದರು.
ಶೌರ್ಯ ವಿಪತ್ತು ನಿರ್ವಹಣಾ ಕಾರ್ಯಕ್ರಮ ಯೋಜನಾಧಿಕಾರಿಗಳಾದ ಜೈವಂತ್ ಪಟಗಾರ ಪ್ರಾಸ್ತಾವಿಕ ಮಾತುಗಳನ್ನಾಡಿದರು
ಯೋಜನಾಧಿಕಾರಿ ಕಿಶೋರ್ ಕುಮಾರ್,ಕಾರ್ಕಳ ತಾಲೂಕು ಸಮಿತಿಯ ಮಾ. ಸದಾನಂದ ಸಾಲ್ಯಾನ್,ಮಾ. ನವೀನ್ ರವರು ಉಪಸ್ಥಿತರಿದ್ದರು. ತರಬೇತಿ ಕಾರ್ಯಗಾರದಲ್ಲಿ ಕಾರ್ಕಳ ತಾಲೂಕಿನ ಶೌರ್ಯ ಘಟಕಗಳ ಸಂಯೋಜಕರು, ಘಟಕ ಪ್ರತಿನಿಧಿಗಳು, ಸ್ವಯಂ ಸೇವಕರು ಭಾಗವಹಿಸಿದ್ದರು.
ಕಾರ್ಕಳ ತಾಲೂಕು ಕ್ಷೇತ್ರ ಯೋಜನಾಧಿಕಾರಿ ಬಾಲಕೃಷ್ಣ ಹಿರಿಂಜ ಸ್ವಾಗತಿಸಿ,ಗಿರೀಶ್ ವಂದಿಸಿದರು. ಮೇಲ್ವಿಚಾರಕರಾದ ಶ್ರೀಮತಿ ಗೀತಾ ನಿರೂಪಿಸಿದರು.


